6:32 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಶೈಕ್ಷಣಿಕ ಹಂತದಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಬೇಕು: ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್

11/08/2024, 21:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡುವುದಾದರೆ ಅದು ಪರಿಸರ ಉಳಿವಿನ ಕೊಡುಗೆಯಾಗಿರುತ್ತದೆ ಮತ್ತು ಶೈಕ್ಷಣಿಕ ಹಂತದಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್ ಹೇಳಿದರು.
ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳುವೆ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ವಿವಿಧ ಮಾದರಿಯ ಗಿಡಗಳನ್ನು ಹಾಗೂ ಹಣ್ಣಿನ ಗಿಡಗಳನ್ನು ವನಮಹೋತ್ಸವ ಕಾರ್ಯಕ್ರಮದಲ್ಲಿ ನೀಡಿ ಸಸಿಗಳನ್ನು ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಉತ್ತಮ ಪರಿಸರವನ್ನು ಉಳಿಸಿಕೊಳ್ಳಲು ಮಕ್ಕಳು ಶೈಕ್ಷಣಿಕ ಹಂತದಲ್ಲಿ ಅದರ ಬಗ್ಗೆ ಕಾಳಜಿಯನ್ನು ಹೊಂದಿರಬೇಕು ಮುಂದಿನ ಪೀಳಿಗೆಗೆ ಮತ್ತು ನಮ್ಮ ರಕ್ಷಣೆಗೆ ಪರಿಸರ ಅಗತ್ಯ ಎಂದು ತಿಳಿಸಿದರು.
ನಂತರ ವಲಯ ತರಬೇತಿದಾರರಾದ ಕೆ. ಪಿ. ಎಸ್. ಸ್ವಾಮಿ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಪರಿಸರವು ಹೇಗೆ ಕುಲಷಿತವಾಗುತ್ತಿದೆ ಎಂದು ನಾವು ತಿಳಿಯಲ್ಪಟ್ಟಿದ್ದೇವೆ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರದ ಅವಘಡಗಳು ಸಂಭವಿಸದಂತೆ ಮಣ್ಣಿನ ರಕ್ಷಣೆಯನ್ನು ಗಿಡಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು ಎಂದು ತಿಳಿಸಿದರು.


ನಂತರ ಪೂರ್ವಾಧ್ಯಕ್ಷರಾದ ನಾಗರಾಜ್ ಮಾತನಾಡಿ, ಶಾಲಾ ಮಕ್ಕಳು ಒಂದು ಗಿಡದ ಜವಾಬ್ದಾರಿಯನ್ನು ತೆಗೆದುಕೊಂಡು ಸಂರಕ್ಷಿಸಿದರೆ ಅವರಿಗೆ ಮುಂದಿನ ಆರು ತಿಂಗಳಲ್ಲಿ ಬಹುಮಾನವನ್ನು ನೀಡುತ್ತೇವೆ ಎಂದು ಮಕ್ಕಳಿಗೆ ಉತ್ತೇಜನ ನೀಡಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಭರತ್ ಕುಮಾರ್, ಅಂಬಳಿಕೆ ಗಿರೀಶ್, ರೊ ಮನೋಜ್ ಕುಮಾರ್ , ಪಿ. ವಿ. ಭರತ್ ಕುಮಾರ್, ವಾಣಿ ಗಣೇಶ್ ನಿಕಟ ಪೂರ್ವಾಧ್ಯಕ್ಷರು , ಇನ್ನರ್ವಿಲ್ ಕ್ಲಬ್ ತೀರ್ಥಹಳ್ಳಿ ನಯನ ಜಯಪ್ರಕಾಶ್ ಶೆಟ್ಟಿ, ಜ್ಯೋತಿ , .ಲಪ್ರತಿಮಾ, ವಿಶ್ವನಾಥ ಶೆಟ್ಟಿ ಸೇರಿದಂತೆ ಶಿಕ್ಷಕರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು