7:18 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಶೈಕ್ಷಣಿಕ ಹಂತದಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಬೇಕು: ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್

11/08/2024, 21:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡುವುದಾದರೆ ಅದು ಪರಿಸರ ಉಳಿವಿನ ಕೊಡುಗೆಯಾಗಿರುತ್ತದೆ ಮತ್ತು ಶೈಕ್ಷಣಿಕ ಹಂತದಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್ ಹೇಳಿದರು.
ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳುವೆ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ವಿವಿಧ ಮಾದರಿಯ ಗಿಡಗಳನ್ನು ಹಾಗೂ ಹಣ್ಣಿನ ಗಿಡಗಳನ್ನು ವನಮಹೋತ್ಸವ ಕಾರ್ಯಕ್ರಮದಲ್ಲಿ ನೀಡಿ ಸಸಿಗಳನ್ನು ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಉತ್ತಮ ಪರಿಸರವನ್ನು ಉಳಿಸಿಕೊಳ್ಳಲು ಮಕ್ಕಳು ಶೈಕ್ಷಣಿಕ ಹಂತದಲ್ಲಿ ಅದರ ಬಗ್ಗೆ ಕಾಳಜಿಯನ್ನು ಹೊಂದಿರಬೇಕು ಮುಂದಿನ ಪೀಳಿಗೆಗೆ ಮತ್ತು ನಮ್ಮ ರಕ್ಷಣೆಗೆ ಪರಿಸರ ಅಗತ್ಯ ಎಂದು ತಿಳಿಸಿದರು.
ನಂತರ ವಲಯ ತರಬೇತಿದಾರರಾದ ಕೆ. ಪಿ. ಎಸ್. ಸ್ವಾಮಿ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಪರಿಸರವು ಹೇಗೆ ಕುಲಷಿತವಾಗುತ್ತಿದೆ ಎಂದು ನಾವು ತಿಳಿಯಲ್ಪಟ್ಟಿದ್ದೇವೆ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರದ ಅವಘಡಗಳು ಸಂಭವಿಸದಂತೆ ಮಣ್ಣಿನ ರಕ್ಷಣೆಯನ್ನು ಗಿಡಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು ಎಂದು ತಿಳಿಸಿದರು.


ನಂತರ ಪೂರ್ವಾಧ್ಯಕ್ಷರಾದ ನಾಗರಾಜ್ ಮಾತನಾಡಿ, ಶಾಲಾ ಮಕ್ಕಳು ಒಂದು ಗಿಡದ ಜವಾಬ್ದಾರಿಯನ್ನು ತೆಗೆದುಕೊಂಡು ಸಂರಕ್ಷಿಸಿದರೆ ಅವರಿಗೆ ಮುಂದಿನ ಆರು ತಿಂಗಳಲ್ಲಿ ಬಹುಮಾನವನ್ನು ನೀಡುತ್ತೇವೆ ಎಂದು ಮಕ್ಕಳಿಗೆ ಉತ್ತೇಜನ ನೀಡಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಭರತ್ ಕುಮಾರ್, ಅಂಬಳಿಕೆ ಗಿರೀಶ್, ರೊ ಮನೋಜ್ ಕುಮಾರ್ , ಪಿ. ವಿ. ಭರತ್ ಕುಮಾರ್, ವಾಣಿ ಗಣೇಶ್ ನಿಕಟ ಪೂರ್ವಾಧ್ಯಕ್ಷರು , ಇನ್ನರ್ವಿಲ್ ಕ್ಲಬ್ ತೀರ್ಥಹಳ್ಳಿ ನಯನ ಜಯಪ್ರಕಾಶ್ ಶೆಟ್ಟಿ, ಜ್ಯೋತಿ , .ಲಪ್ರತಿಮಾ, ವಿಶ್ವನಾಥ ಶೆಟ್ಟಿ ಸೇರಿದಂತೆ ಶಿಕ್ಷಕರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು