1:39 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಶಕ್ತಿನಗರ ಕ್ಯಾಸ್ಟೊಲಿನೋ ಕಾಲೊನಿ ಬೃಹತ್ ತಡೆಗೋಡೆ ಕುಸಿತ: ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಭೇಟಿ; ಪರಿಶೀಲನೆ

13/07/2025, 13:12

ಮಂಗಳೂರು(reporterkarnataka.com):ನಗರದಲ್ಲೆಡೆ ಸುರಿದ ಮಳೆಗೆ ಶಕ್ತಿನಗರದ ಕ್ಯಾಸ್ಟೊಲಿನೋ ಕಾಲೊನಿ ಬಳಿ ಬೃಹತ್ ತಡೆಗೋಡೆಯೊಂದು ಕುಸಿದಿದ್ದು ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಡೆಗೋಡೆ ಕುಸಿದ ರಭಸಕ್ಕೆ ಅಲ್ಲಿನ ಕಾಂಕ್ರೀಟ್ ರಸ್ತೆ, ಚರಂಡಿ, ಮ್ಯಾನ್ ಹೋಲ್ ಮತ್ತು ಬಾವಿಗೆ ತೀವ್ರ ಹಾನಿಯಾಗಿದೆ. ಅಲ್ಲದೇ ಸಮೀಪದ ಕೆಲವು ಮನೆಗಳ ಮೆಟ್ಟಿಲುಗಳವರೆಗೂ ತಡೆಗೋಡೆಯ ಅವಶೇಷಗಳು ಬಿದ್ದಿದ್ದು,ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಕೂಡಲೇ ಸ್ಥಳೀಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಎಲ್ಲಾ ಅವಶೇಷಗಳನ್ನು ತೆರವುಗೊಳಿಸಿ, ಹಾನಿಗೊಳಗಾಗಿರುವ ರಸ್ತೆ, ಚರಂಡಿ ಮೊದಲಾದವುಗಳ ಮರು ನಿರ್ಮಾಣದ ಬಗ್ಗೆ ಕ್ರಮವಹಿಸಿ ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರಾದ ಕಿಶೋರ್ ಕೊಟ್ಟಾರಿ, ಶೈಲೇಶ್ ಶೆಟ್ಟಿ, ಸ್ಥಳೀಯ ಪ್ರಮುಖರಾದ ವಿನಯ್, ಚನ್ನು, ರಮೇಶ್, ಸೇರಿದಂತೆ ಪಾಲಿಕೆಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಮೆಸ್ಕಾಂ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು