2:23 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿಧಾನಸಭೆ ಅಧಿವೇಶನದಲ್ಲೂ ಪ್ರಸ್ತಾಪವಾದ ಶಕ್ತಿನಗರದ ಘಟನೆ: ಶಾಸಕ ಕಾಮತ್ ಮೇಲೆ ಎಫ್ ಐಆರ್ ಗೆ ವಿರೋಧ

06/03/2025, 22:02

ಬೆಂಗಳೂರು(reporterkarnataka.com): ಶಕ್ತಿನಗರದ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಪ್ರಕರಣದ ವಿರುದ್ಧ ಅಧಿವೇಶನದಲ್ಲೂ ವಿಷಯ ಪ್ರಸ್ತಾಪವಾಗಿ ರಾಜ್ಯ ಬಿಜೆಪಿ ನಾಯಕರು ಶಾಸಕ ವೇದವ್ಯಾಸ ಕಾಮತ್ ಬೆಂಬಲಕ್ಕೆ ನಿಂತರು.


ಬಿಜೆಪಿ ಹಿರಿಯ ಶಾಸಕರಾದ ಅರವಿಂದ್ ಬೆಲ್ಲದ್ ವಿಷಯ ಪ್ರಸ್ತಾಪಿಸಿ ಶಾಸಕ ಕಾಮತ್ ರವರ ಮೇಲಿನ ಸುಳ್ಳು ಪ್ರಕರಣ ದಾಖಲಾಗಿರುವುದನ್ನು ಖಂಡಿಸಿದರು. ನಂತರ ಮಾತನಾಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ದಿನಕ್ಕೆ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಶಾಸಕರುಗಳ ಮೇಲೆ ಈ ರೀತಿಯಾಗಿ ಸುಳ್ಳು ಪ್ರಕರಣಗಳು ದಾಖಲಾಗುತ್ತಾ ಹೋದರೆ ಇನ್ನು ಮೇಲೆ ಯಾವ ಕಾರ್ಯಕ್ರಮಕ್ಕೂ ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಧಾರ್ಮಿಕ ಕಾರ್ಯಕ್ರಮ ಮುಗಿಸಿ ಮರಳು ಸಂದರ್ಭದಲ್ಲಿ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ನನಗೆ ಘೇರಾವ್ ಹಾಕಲು ಯತ್ನಿಸಿದ್ದು ಮಾತ್ರವಲ್ಲದೇ ನನ್ನ ಜೊತೆಗಿದ್ದ ಪರಿಶಿಷ್ಟ ಸಮುದಾಯದ ಬಂಧುವೊಬ್ಬನ ಮೇಲೆ ಹಲ್ಲೆ ನಡೆಸಿ, ನಮ್ಮ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ಕಾಮತ್ ರವರು ಸದನದಲ್ಲಿ ಹೇಳಿದರು.
ಅಂತಿಮವಾಗಿ ಗೃಹ ಸಚಿವರು ಈ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಸೂಕ್ತ ಕ್ರಮಕೈಗೊಳ್ಳುವುದಾಗಿ ಸದನಕ್ಕೆ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು