12:46 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ವಿಧಾನಸಭೆ ಅಧಿವೇಶನದಲ್ಲೂ ಪ್ರಸ್ತಾಪವಾದ ಶಕ್ತಿನಗರದ ಘಟನೆ: ಶಾಸಕ ಕಾಮತ್ ಮೇಲೆ ಎಫ್ ಐಆರ್ ಗೆ ವಿರೋಧ

06/03/2025, 22:02

ಬೆಂಗಳೂರು(reporterkarnataka.com): ಶಕ್ತಿನಗರದ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಪ್ರಕರಣದ ವಿರುದ್ಧ ಅಧಿವೇಶನದಲ್ಲೂ ವಿಷಯ ಪ್ರಸ್ತಾಪವಾಗಿ ರಾಜ್ಯ ಬಿಜೆಪಿ ನಾಯಕರು ಶಾಸಕ ವೇದವ್ಯಾಸ ಕಾಮತ್ ಬೆಂಬಲಕ್ಕೆ ನಿಂತರು.


ಬಿಜೆಪಿ ಹಿರಿಯ ಶಾಸಕರಾದ ಅರವಿಂದ್ ಬೆಲ್ಲದ್ ವಿಷಯ ಪ್ರಸ್ತಾಪಿಸಿ ಶಾಸಕ ಕಾಮತ್ ರವರ ಮೇಲಿನ ಸುಳ್ಳು ಪ್ರಕರಣ ದಾಖಲಾಗಿರುವುದನ್ನು ಖಂಡಿಸಿದರು. ನಂತರ ಮಾತನಾಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ದಿನಕ್ಕೆ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಶಾಸಕರುಗಳ ಮೇಲೆ ಈ ರೀತಿಯಾಗಿ ಸುಳ್ಳು ಪ್ರಕರಣಗಳು ದಾಖಲಾಗುತ್ತಾ ಹೋದರೆ ಇನ್ನು ಮೇಲೆ ಯಾವ ಕಾರ್ಯಕ್ರಮಕ್ಕೂ ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಧಾರ್ಮಿಕ ಕಾರ್ಯಕ್ರಮ ಮುಗಿಸಿ ಮರಳು ಸಂದರ್ಭದಲ್ಲಿ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ನನಗೆ ಘೇರಾವ್ ಹಾಕಲು ಯತ್ನಿಸಿದ್ದು ಮಾತ್ರವಲ್ಲದೇ ನನ್ನ ಜೊತೆಗಿದ್ದ ಪರಿಶಿಷ್ಟ ಸಮುದಾಯದ ಬಂಧುವೊಬ್ಬನ ಮೇಲೆ ಹಲ್ಲೆ ನಡೆಸಿ, ನಮ್ಮ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ಕಾಮತ್ ರವರು ಸದನದಲ್ಲಿ ಹೇಳಿದರು.
ಅಂತಿಮವಾಗಿ ಗೃಹ ಸಚಿವರು ಈ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಸೂಕ್ತ ಕ್ರಮಕೈಗೊಳ್ಳುವುದಾಗಿ ಸದನಕ್ಕೆ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು