4:27 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಶಕ್ತಿನಗರ: ಪೈಟಿಂಗ್ ಮಾಡುತ್ತಿದ್ದಾಗ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಯುವಕ ದಾರುಣ ಮೃತ್ಯು

26/02/2024, 20:09

ಮಂಗಳೂರು(reporterkarnataka.com): ಮನೆಯೊಂದರ ಪೈಟಿಂಗ್ ನಡೆಸುತ್ತಿದ್ದ ವೇಳೆ ಅಕಸ್ಮಾತ್ ಬಿದ್ದು ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಕ್ತಿನಗರದಲ್ಲಿ ನಡೆದಿದೆ.
ಮೃತರನ್ನು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಎಂದು ಗುರುತಿಸಲಾಗಿದೆ. ಮನೆಯೊಂದರ ಎರಡನೇ ಮಹಡಿಯ ಪೈಂಟಿಂಗ್ ಕಾರ್ಯ ಮಾಡುತ್ತಿರುವ ವೇಳೆ ಆಯತಪ್ಪಿ ಏಣಿಯ ಜೊತೆಗೆ ಪೈಂಟರ್ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು.
ಶಕ್ತಿನಗರದ ಮನೆಯೊಂದರಲ್ಲಿ ಕಳೆದ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಮೋಹಿತ್ ಮತ್ತು ದೀಪಕ್ ಎರಡನೇ ಮಹಡಿಯಲ್ಲಿ ಹೊರಭಾಗದ ಗೋಡೆಗೆ ಪೈಂಟ್ ಮಾಡುತ್ತಿದ್ದಾಗ ಏಣಿ ಜಾರಿ ಹೊರಕ್ಕೆ ಬಿದ್ದಿದೆ. ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು