10:29 PM Sunday26 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ಶಕ್ತಿನಗರ: ಪೈಟಿಂಗ್ ಮಾಡುತ್ತಿದ್ದಾಗ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಯುವಕ ದಾರುಣ ಮೃತ್ಯು

26/02/2024, 20:09

ಮಂಗಳೂರು(reporterkarnataka.com): ಮನೆಯೊಂದರ ಪೈಟಿಂಗ್ ನಡೆಸುತ್ತಿದ್ದ ವೇಳೆ ಅಕಸ್ಮಾತ್ ಬಿದ್ದು ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಕ್ತಿನಗರದಲ್ಲಿ ನಡೆದಿದೆ.
ಮೃತರನ್ನು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಎಂದು ಗುರುತಿಸಲಾಗಿದೆ. ಮನೆಯೊಂದರ ಎರಡನೇ ಮಹಡಿಯ ಪೈಂಟಿಂಗ್ ಕಾರ್ಯ ಮಾಡುತ್ತಿರುವ ವೇಳೆ ಆಯತಪ್ಪಿ ಏಣಿಯ ಜೊತೆಗೆ ಪೈಂಟರ್ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು.
ಶಕ್ತಿನಗರದ ಮನೆಯೊಂದರಲ್ಲಿ ಕಳೆದ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಮೋಹಿತ್ ಮತ್ತು ದೀಪಕ್ ಎರಡನೇ ಮಹಡಿಯಲ್ಲಿ ಹೊರಭಾಗದ ಗೋಡೆಗೆ ಪೈಂಟ್ ಮಾಡುತ್ತಿದ್ದಾಗ ಏಣಿ ಜಾರಿ ಹೊರಕ್ಕೆ ಬಿದ್ದಿದೆ. ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು