7:06 PM Tuesday25 - March 2025
ಬ್ರೇಕಿಂಗ್ ನ್ಯೂಸ್
ಅಂಬೇಡ್ಕರ್‌ ಗೆ ಜೀವಮಾನವಿಡಿ ಕಾಂಗ್ರೆಸ್‌ ಅಪಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ… Delhi | ಸಂವಿಧಾನ ವಿರೋಧಿ ರಾಜ್ಯ ಸರಕಾರ ರಾಜೀನಾಮೆ ನೀಡಲಿ: ಮಾಜಿ ಸಿಎಂ… Honey Trap | ಬಿಜೆಪಿ ಬಳಿ ಸಿಡಿ‌ ಫ್ಯಾಕ್ಟರಿಯೇ ಇದೆ; ಅವರ ಕಾಲದಲ್ಲಿ… Speaker | ಅಶಿಸ್ತು, ಅಗೌರವ ತೋರಿಸಿದರೆ ಮುಂದಿನ ಅಧಿವೇಶನದಲ್ಲೂ ಸಸ್ಪೆಂಡ್ ಮಾಡುವೆ: ಸ್ಪೀಕರ್… ಚಿಕ್ಕಮಗಳೂರು: ಸಿಡಿಲು ಬಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದ ಮಹಿಳೆ ಸಾವು IndiGo6E | ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್… FIR Against Madhwaraj | ಮಹಿಳೆಯ ಕಟ್ಟಿ ಹಾಕಿ ಹಲ್ಲೆ ಪ್ರಕರಣದ ಸಮರ್ಥನೆ?:… Ugadi | ರಾಜಭವನದದಲ್ಲಿ ಚಿಗುರಿದ ‘ಚಂದನ’ದ ‘ಚೈತ್ರಾಂಜಲಿ’: ಗಾಜಿನ ಮನೆಯಲ್ಲಿ ಮೂಡಿ ಬಂತು… Karnataka Bundh | ಪ್ರತಿಷ್ಠೆಗಾಗಿ ಅನಾವಶ್ಯಕ ಬಂದ್ ಕರೆ ಕೊಡಬಾರದು: ಮಾಜಿ ಗೃಹ…

ಇತ್ತೀಚಿನ ಸುದ್ದಿ

Shame..Shame | ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ: ಕಾಂಗ್ರೆಸ್ – ಬಿಜೆಪಿ ಮಧ್ಯೆ ರಾಜಕೀಯ ಮೇಲಾಟ

24/03/2025, 15:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜಕೀಯ ಮೇಲಾಟಕ್ಕೆ ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಸಾಕ್ಷಿಯಾದ ಘಟನೆ ಇಂದು ಚಿಕ್ಕಮಗಳೂರಿನಲ್ಲಿ ನಡೆಯಿತು.

ಆಡಳಿತರೂಢ ಕಾಂಗ್ರೆಸ್ ಮತ್ತು ಪ್ರಮುಖ ಪ್ರತಿಪಕ್ಷವಾದ
ಬಿಜೆಪಿ ಮಧ್ಯೆ ಕಟ್ಟಡ ಉದ್ಘಾಟನೆ ಕಾರ್ಯಕ್ರಮ
ಕ್ರೆಡಿಟ್ ವಾರ್ ಆಗಿ ಪರಿವರ್ತನೆಗೊಂಡಿತು. ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ. ಜಾರ್ಜ್, ಕಾಂಗ್ರೆಸ್ ಶಾಸಕ ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ, ಬಿಜೆಪಿಯ ಸಿ.ಟಿ. ರವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಿ.ಟಿ.ರವಿ ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಅವರನ್ನು ಹೊತ್ತು ಕುಣಿದರು.
ಸಚಿವ ಜಾರ್ಜ್, ಶಾಸಕ ತಮ್ಮಯ್ಯ ಎದುರೇ ಸಿ.ಟಿ.ರವಿ ಹೊತ್ತು ಡ್ಯಾನ್ಸ್ ಮಾಡಿದರು.
ಕಾರ್ಯಕ್ರಮ ಮುಗಿಯುವ ಮುನ್ನವೇ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.
ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿತ್ತು. ಇಂದು ಹೊರರೋಗಿ ವಿಭಾಗವನ್ನು ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಿದರು.

ಒಂದೆಡೆ ಸಿ.ಟಿ.ರವಿಗೆ ಜೈ…ಕೇಳಿ ಬಂದರೆ, ಮತ್ತೊಂದೆಡೆ ಜಾರ್ಜ್ ಗೆ ಜೈ, ಮಗದೊಡೆ ತಮ್ಮಯ್ಯನಿಗೆ ಜೈ ಮಾರ್ದನಿಸುತ್ತಿತ್ತು.
ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ ಸಂದರ್ಭದಲ್ಲಿ ಟೇಪ್ ಕಟ್ ಮಾಡುವಾಗ ಮೂವರು ನಾಯಕರ ಬೆಂಬಲಿಗರಿಂದ ಘೋಷಣೆ ಮೊಳಗಿತು. ಒಂದು ಗುಂಪಿಗೆ ಸೆಡ್ಡು ಹೊಡೆಯುವಂತೆ ಮತ್ತೊಂದು ಗುಂಪಿನಿಂದ ಘೋಷಣೆ ಮೊಳಗುತ್ತಿತು. ನೆರದಿದ್ದವರಿಗೆ ಯಾರೂ, ಯಾರ ಪರ ಕುಗ್ತಿದ್ದಾರೆಂಬುದೇ ತಿಳಿಯಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು