2:09 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Shame..Shame | ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ: ಕಾಂಗ್ರೆಸ್ – ಬಿಜೆಪಿ ಮಧ್ಯೆ ರಾಜಕೀಯ ಮೇಲಾಟ

24/03/2025, 15:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜಕೀಯ ಮೇಲಾಟಕ್ಕೆ ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಸಾಕ್ಷಿಯಾದ ಘಟನೆ ಇಂದು ಚಿಕ್ಕಮಗಳೂರಿನಲ್ಲಿ ನಡೆಯಿತು.

ಆಡಳಿತರೂಢ ಕಾಂಗ್ರೆಸ್ ಮತ್ತು ಪ್ರಮುಖ ಪ್ರತಿಪಕ್ಷವಾದ
ಬಿಜೆಪಿ ಮಧ್ಯೆ ಕಟ್ಟಡ ಉದ್ಘಾಟನೆ ಕಾರ್ಯಕ್ರಮ
ಕ್ರೆಡಿಟ್ ವಾರ್ ಆಗಿ ಪರಿವರ್ತನೆಗೊಂಡಿತು. ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ. ಜಾರ್ಜ್, ಕಾಂಗ್ರೆಸ್ ಶಾಸಕ ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ, ಬಿಜೆಪಿಯ ಸಿ.ಟಿ. ರವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಿ.ಟಿ.ರವಿ ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಅವರನ್ನು ಹೊತ್ತು ಕುಣಿದರು.
ಸಚಿವ ಜಾರ್ಜ್, ಶಾಸಕ ತಮ್ಮಯ್ಯ ಎದುರೇ ಸಿ.ಟಿ.ರವಿ ಹೊತ್ತು ಡ್ಯಾನ್ಸ್ ಮಾಡಿದರು.
ಕಾರ್ಯಕ್ರಮ ಮುಗಿಯುವ ಮುನ್ನವೇ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.
ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿತ್ತು. ಇಂದು ಹೊರರೋಗಿ ವಿಭಾಗವನ್ನು ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಿದರು.

ಒಂದೆಡೆ ಸಿ.ಟಿ.ರವಿಗೆ ಜೈ…ಕೇಳಿ ಬಂದರೆ, ಮತ್ತೊಂದೆಡೆ ಜಾರ್ಜ್ ಗೆ ಜೈ, ಮಗದೊಡೆ ತಮ್ಮಯ್ಯನಿಗೆ ಜೈ ಮಾರ್ದನಿಸುತ್ತಿತ್ತು.
ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ ಸಂದರ್ಭದಲ್ಲಿ ಟೇಪ್ ಕಟ್ ಮಾಡುವಾಗ ಮೂವರು ನಾಯಕರ ಬೆಂಬಲಿಗರಿಂದ ಘೋಷಣೆ ಮೊಳಗಿತು. ಒಂದು ಗುಂಪಿಗೆ ಸೆಡ್ಡು ಹೊಡೆಯುವಂತೆ ಮತ್ತೊಂದು ಗುಂಪಿನಿಂದ ಘೋಷಣೆ ಮೊಳಗುತ್ತಿತು. ನೆರದಿದ್ದವರಿಗೆ ಯಾರೂ, ಯಾರ ಪರ ಕುಗ್ತಿದ್ದಾರೆಂಬುದೇ ತಿಳಿಯಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು