6:35 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Shame..Shame | ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ: ಕಾಂಗ್ರೆಸ್ – ಬಿಜೆಪಿ ಮಧ್ಯೆ ರಾಜಕೀಯ ಮೇಲಾಟ

24/03/2025, 15:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜಕೀಯ ಮೇಲಾಟಕ್ಕೆ ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಸಾಕ್ಷಿಯಾದ ಘಟನೆ ಇಂದು ಚಿಕ್ಕಮಗಳೂರಿನಲ್ಲಿ ನಡೆಯಿತು.

ಆಡಳಿತರೂಢ ಕಾಂಗ್ರೆಸ್ ಮತ್ತು ಪ್ರಮುಖ ಪ್ರತಿಪಕ್ಷವಾದ
ಬಿಜೆಪಿ ಮಧ್ಯೆ ಕಟ್ಟಡ ಉದ್ಘಾಟನೆ ಕಾರ್ಯಕ್ರಮ
ಕ್ರೆಡಿಟ್ ವಾರ್ ಆಗಿ ಪರಿವರ್ತನೆಗೊಂಡಿತು. ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ. ಜಾರ್ಜ್, ಕಾಂಗ್ರೆಸ್ ಶಾಸಕ ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ, ಬಿಜೆಪಿಯ ಸಿ.ಟಿ. ರವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಿ.ಟಿ.ರವಿ ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಅವರನ್ನು ಹೊತ್ತು ಕುಣಿದರು.
ಸಚಿವ ಜಾರ್ಜ್, ಶಾಸಕ ತಮ್ಮಯ್ಯ ಎದುರೇ ಸಿ.ಟಿ.ರವಿ ಹೊತ್ತು ಡ್ಯಾನ್ಸ್ ಮಾಡಿದರು.
ಕಾರ್ಯಕ್ರಮ ಮುಗಿಯುವ ಮುನ್ನವೇ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.
ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿತ್ತು. ಇಂದು ಹೊರರೋಗಿ ವಿಭಾಗವನ್ನು ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಿದರು.

ಒಂದೆಡೆ ಸಿ.ಟಿ.ರವಿಗೆ ಜೈ…ಕೇಳಿ ಬಂದರೆ, ಮತ್ತೊಂದೆಡೆ ಜಾರ್ಜ್ ಗೆ ಜೈ, ಮಗದೊಡೆ ತಮ್ಮಯ್ಯನಿಗೆ ಜೈ ಮಾರ್ದನಿಸುತ್ತಿತ್ತು.
ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ ಸಂದರ್ಭದಲ್ಲಿ ಟೇಪ್ ಕಟ್ ಮಾಡುವಾಗ ಮೂವರು ನಾಯಕರ ಬೆಂಬಲಿಗರಿಂದ ಘೋಷಣೆ ಮೊಳಗಿತು. ಒಂದು ಗುಂಪಿಗೆ ಸೆಡ್ಡು ಹೊಡೆಯುವಂತೆ ಮತ್ತೊಂದು ಗುಂಪಿನಿಂದ ಘೋಷಣೆ ಮೊಳಗುತ್ತಿತು. ನೆರದಿದ್ದವರಿಗೆ ಯಾರೂ, ಯಾರ ಪರ ಕುಗ್ತಿದ್ದಾರೆಂಬುದೇ ತಿಳಿಯಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು