11:03 PM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Shame..Shame | ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ: ಕಾಂಗ್ರೆಸ್ – ಬಿಜೆಪಿ ಮಧ್ಯೆ ರಾಜಕೀಯ ಮೇಲಾಟ

24/03/2025, 15:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜಕೀಯ ಮೇಲಾಟಕ್ಕೆ ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಸಾಕ್ಷಿಯಾದ ಘಟನೆ ಇಂದು ಚಿಕ್ಕಮಗಳೂರಿನಲ್ಲಿ ನಡೆಯಿತು.

ಆಡಳಿತರೂಢ ಕಾಂಗ್ರೆಸ್ ಮತ್ತು ಪ್ರಮುಖ ಪ್ರತಿಪಕ್ಷವಾದ
ಬಿಜೆಪಿ ಮಧ್ಯೆ ಕಟ್ಟಡ ಉದ್ಘಾಟನೆ ಕಾರ್ಯಕ್ರಮ
ಕ್ರೆಡಿಟ್ ವಾರ್ ಆಗಿ ಪರಿವರ್ತನೆಗೊಂಡಿತು. ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ. ಜಾರ್ಜ್, ಕಾಂಗ್ರೆಸ್ ಶಾಸಕ ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ, ಬಿಜೆಪಿಯ ಸಿ.ಟಿ. ರವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಿ.ಟಿ.ರವಿ ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಅವರನ್ನು ಹೊತ್ತು ಕುಣಿದರು.
ಸಚಿವ ಜಾರ್ಜ್, ಶಾಸಕ ತಮ್ಮಯ್ಯ ಎದುರೇ ಸಿ.ಟಿ.ರವಿ ಹೊತ್ತು ಡ್ಯಾನ್ಸ್ ಮಾಡಿದರು.
ಕಾರ್ಯಕ್ರಮ ಮುಗಿಯುವ ಮುನ್ನವೇ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.
ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿತ್ತು. ಇಂದು ಹೊರರೋಗಿ ವಿಭಾಗವನ್ನು ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಿದರು.

ಒಂದೆಡೆ ಸಿ.ಟಿ.ರವಿಗೆ ಜೈ…ಕೇಳಿ ಬಂದರೆ, ಮತ್ತೊಂದೆಡೆ ಜಾರ್ಜ್ ಗೆ ಜೈ, ಮಗದೊಡೆ ತಮ್ಮಯ್ಯನಿಗೆ ಜೈ ಮಾರ್ದನಿಸುತ್ತಿತ್ತು.
ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ ಸಂದರ್ಭದಲ್ಲಿ ಟೇಪ್ ಕಟ್ ಮಾಡುವಾಗ ಮೂವರು ನಾಯಕರ ಬೆಂಬಲಿಗರಿಂದ ಘೋಷಣೆ ಮೊಳಗಿತು. ಒಂದು ಗುಂಪಿಗೆ ಸೆಡ್ಡು ಹೊಡೆಯುವಂತೆ ಮತ್ತೊಂದು ಗುಂಪಿನಿಂದ ಘೋಷಣೆ ಮೊಳಗುತ್ತಿತು. ನೆರದಿದ್ದವರಿಗೆ ಯಾರೂ, ಯಾರ ಪರ ಕುಗ್ತಿದ್ದಾರೆಂಬುದೇ ತಿಳಿಯಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು