9:38 PM Wednesday2 - July 2025
ಬ್ರೇಕಿಂಗ್ ನ್ಯೂಸ್
Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ…

ಇತ್ತೀಚಿನ ಸುದ್ದಿ

ಶನಿವಾರಸಂತೆ: ವಿಜಯ ದಿವಸ್ ಆಚರಣೆ; ಬೈಕ್ ಮತ್ತು ವಾಹನ ಜಾಥಾ

20/12/2021, 11:38

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆ ಹಿಂದು ಜಾಗರಣ ವೇದಿಕೆ ಹಾಗೂ ಸೋಮವಾರಪೇಟೆ ತಾಲೂಕು ಯುವ ವಾಹಿನಿ ನೇತೃತ್ವದಲ್ಲಿ ಶನಿವಾರ ಸಂತೆಯಲ್ಲಿ ವಿಜಯ ದಿವಸ (ಬಾಂಗ್ಲಾ ವಿಮೋಚನಾ ದಿನ) ಪ್ರಯುಕ್ತ ಬೈಕ್ ಮತ್ತು ವಾಹನ ಜಾಥಾ ನಡೆಸಲಾಯಿತು.

 ಶನಿವಾರ ಸಂತೆಯ ಗೋಪಾಲಪುರದಿಂದ ಬೈಕ್ ಜಾಥಾ ಹೊರಟು ಬೆಂಗಳೂರು ಮಾರ್ಗವಾಗಿ ಕೊಡ್ಲಿಪೇಟೆ ಮೂಲಕ  ಶನಿವಾರಸಂತೆಯ ಕೆ. ಆರ್. ಸಿ. ಸರ್ಕಲ್ ತಲುಪಿತು. ನಂತರ ಕೆ ಆರ್ ಸಿ ಸರ್ಕಲ್ ನಲ್ಲಿ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು.   ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸೈನಿಕ ಸಂಘದ ಅಧ್ಯಕ್ಷ ಮಹೇಶ್ ವಹಿಸಿದ್ದರು . 1971ರ ಯುದ್ಧ ದಲ್ಲಿ ಪಾಲ್ಗೊಂಡಿದ್ದ ನಿವೃತ್ತ ಯೋದರದ ಕಾಜುರು ಗ್ರಾಮದ ಎಂ .ಸ್ ಪೊನ್ನಪ್ಪ , ಎಂ.ಎಸ್ ಕಾಳಪ್ಪ , ಅಪ್ಪಾಜಿ .ಶನಿವಾರಸಂತೆಯ ಕಳಲೇ ಗ್ರಾಮದ ಕೆ. ವಿ ಮಂಜುನಾಥ್ ಮತ್ತು ಪುಟ್ಟ ಸ್ವಾಮಿ  ಇವರನ್ನು ಸನ್ಮಾನಿಸಲಾಯಿತು.   ಸೇವಾ ಭಾರತಿ ಜಿಲ್ಲಾ ಅಧ್ಯಕ್ಷರಾದ ಟಿ. ಸಿ. ಚಂದ್ರನ್ ಕಾರ್ಯಕ್ರಮದ ಬೌದ್ಧಿಕ್  ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಸುಭಾಸ್ ತಿಮ್ಮಯ್ಯ, ಸಹ ಸಂಪರ್ಕ ಪ್ರಮುಖ್ ಎಂ. ಬಿ. ಉಮೇಶ್,  ತಾಲೂಕು ಅಧ್ಯಕ್ಷ ಸುನಿಲ್, ಉಪಾಧ್ಯಕ್ಷರಾದ ಸಂದೀಪ್, ಪ್ರಧಾನ ಕಾರ್ಯದರ್ಶಿ ಬೊಜೇಗೌಡ, ಕಾರ್ಯದರ್ಶಿ ಲೋಕೇಶ್, ಹಿಂದು ಯುವ ವಾಹಿನಿ ಜಿಲ್ಲಾ ಪ್ರಮುಖ್ ಚೇತನ್, ವಲಯ  ಪ್ರಮುಖರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು