10:03 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಶಂಕರನಾರಾಯಣ: ಮನೆಯ ಬಾಗಿಲು ಮುರಿದು ಚಿನ್ನಾಭರಣ, ಬೆಳ್ಳಿ ಕಳವು

18/09/2022, 14:52

ಕುಂದಾಪುರ(reporterkarnataka.com): ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸಾವಿರಾರು ರೂ. ಮೌಲ್ಯದ ಚಿನ್ನ ಬೆಳ್ಳಿಯ ಆಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದ ಲಕ್ಕೊಳ್ಳಿಯ ನಾಗೇಂದ್ರ ಪ್ರಸಾದ್ ಎಂಬವರ ಮನೆಯಲ್ಲಿ ನಡೆದಿದೆ. 

ನಾಗೇಂದ್ರ ಪ್ರಸಾದ್ ಅವರು ಕುಟುಂಬ ಸಮೇತರಾಗಿ ಶಂಕರನಾರಾಯಣ ದೇವಸ್ಥಾನಕ್ಕೆ ಪಾರಾಯಣ ಪೂಜೆಗಾಗಿ ತೆರಳಿದ್ದರು. ಪೂಜೆ ಮುಗಿಸಿ ಬಂದು ನೋಡುವಾಗ ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಲ ಗೋಡ್ರೇಜ್ ಕಪಾಟಿನ ಬಾಗಿಲನ್ನು ತೆರೆದು ಅದರೊಳಗಿದ್ದ 50 ಸಾವಿರ ನಗದು, 1/2 ಪವನ್ ತೂಕದ ಒಂದು ಜೊತೆ ಒಲೆ, 3ಸಾವಿರ ರೂ. ಬೆಳ್ಳಿಯ ಅರತಿ ತಟ್ಟೆ, 1ಸಾವಿರ ರೂ. ಬೆಳ್ಳಿಯ ಕುಂಕುಮ ಹಾಕುವ ಭರಣಿ, 600 ರೂ. ಮಗುವಿನ ಕಾಲು ಗೆಜ್ಜೆ, 150 ರೂ. ಮಗುವಿನ ಬೆಳ್ಳಿಯ ಬ್ರಾಸ್ ಲೈಟ್ ಹಾಗೂ 500 ರೂ. ಬೆಳ್ಳಿಯ ಲೋಟ ಸಹಿತ ಒಟ್ಟು 61,250 ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು