9:03 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಶಾಂತಿ- ಸುವ್ಯವಸ್ಥೆ: ದಕ್ಷಿಣ ಕನ್ನಡ ಜಿಲ್ಲೆಯಿಂದ 11 ಮಂದಿ ಗಡಿಪಾರು; ಜಿಲ್ಲಾಧಿಕಾರಿ ಆದೇಶ

11/03/2023, 12:34

ಮಂಗಳೂರು(reporterkarnataka.com): ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅಪರಾಧ ಹಿನ್ನೆಲೆಯುಳ್ಳ 11 ಮಂದಿಯನ್ನು
ದಕ್ಷಿಣ ಕನ್ನಡ ಜಿಲ್ಲೆಯಿಂದ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ.
ಮುಂಬರುವ ವಿಧಾನಸಭೆ ಚುನಾವಣಾ ಹಿನ್ನಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ
ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿಯವರು ವಿಚಾರಣೆ ಕೈಕೊಂಡು 11 ಮಂದಿಯನ್ನು
ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾ.6 ರಿಂದ ಸೆ.6ವರೆಗೆ 6 ತಿಂಗಳ ಕಾಲ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಗಡಿಪಾರಿಗೆ ಒಳಗಾದವರು ಯಾರು ಯಾರು?:
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಜೀರ್ ಕುಣಿಗಲ್, ಇಬ್ರಾಹಿಂ ಖಲೀಲ್, ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಜಯರಾಜ ರೈ, ಪುತ್ತೂರು ನಗರ ಠಾಣಾ ವ್ಯಾಪ್ತಿಯ ಇಬ್ರಾಹಿಂ, ಹಕೀಂ ಕೂರ್ನಡ್ಕ, ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ
ರೋಷನ್, ಪ್ರಸಾದ್, ಉಪ್ಪಿನಂಗಡಿ ಪೊಲೀಸ್‌ಠಾಣಾ ವ್ಯಾಪ್ತಿಯ ಅಬೂಬಕ್ಕರ್ ಸಿದ್ದಿಕ್,ಉಬೈದ್ ಬಿ.ಎಸ್., ತಸ್ಲಿಂ, ಧರ್ಮಸ್ಥಳ
ಪೊಲೀಸ್ ಠಾಣಾ ವ್ಯಾಪ್ತಿಯ ಕಿರಣ್ ಕುಮಾರ್ ಡಿ. ಗಡೀಪಾರು ಶಿಕ್ಷೆಗೆ ಒಳಗಾದವರು.

ಇತ್ತೀಚಿನ ಸುದ್ದಿ

ಜಾಹೀರಾತು