4:05 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಶಾಂತಿ- ಸುವ್ಯವಸ್ಥೆ ಕಾಪಾಡಲು ರಸ್ತೆಗಿಳಿದ ಖಾಕಿ ಪಡೆ: ಮಂಗಳೂರಿನಾದ್ಯಂತ ಫುಲ್ ಟ್ರಾಫಿಕ್ ಜಾಮ್

21/02/2022, 12:44

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ನೆರೆಯ ಶಿವಮೊಗ್ಗ ಜಿಲ್ಲೆಯಲ್ಲಿ ಯುವಕನೊಬ್ಬನ ಹತ್ಯೆ ನಡೆದಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡಲು ಪೊಲೀಸರು ಇಂದು ಬೆಳ್ಳಂಬೆಳಗೆ ರಸ್ತೆಗಿಳಿದರು.

ನಗರದ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸರು ಪಥಸಂಚನ ನಡೆಸಿ ಸಾರ್ವಜನಿಕರಲ್ಲಿ ಧೈರ್ಯ ತುಂಬಿದರೆ, ದುಷ್ಕರ್ಮಿಗಳ ಹೃದಯದಲ್ಲಿ ನಡುಕ ಉಂಟು ಮಾಡಿದರು.

ಪೊಲೀಸರಿಂದ ಪಥ ಸಂಚಲನ ಬೆಳಗ್ಗೆ 8 ಗಂಟೆಗೆ ಆರಂಭವಾಯಿತು. ಬಲ್ಲಾಳ್ ಬಾಗ್ ನಿಂದ ಶುರುವಾಗಿ ಪಿ.ವಿ.ಎಸ್ ಸರ್ಕಲ್, ಜ್ಯೋತಿ ಅಂಬೇಡ್ಕರ್, ಸರ್ಕಲ್ ಆಗಿ ಹಂಪನಕಟ್ಟಾ ಮಾರ್ಗವಾಗಿ ಪೋಲಿಸ್ ಆಯುಕ್ತರ ಕಚೇರಿ ಬಳಿ ಕೊನೆಗೊಂಡಿತು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪಥಸಂಚಲನ ಆಯೋಜಿಸಲಾಗಿತ್ತು. ಡಿಸಿಪಿ ಹರಿರಾಂ ಶಂಕರ್, ಟ್ರಾಫಿಕ್ ಎಸಿಪಿ ನಟರಾಜ್ ಸಹಿತ ಹಲವು ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳು ಪಥ ಸಂಚಲನದಲ್ಲಿ ಪಾಲ್ಗೊಂಡರು.

ಪಥ ಸಂಚಲನದಿಂದ ನಗರದ ಬಹುತೇಕ ಕಡೆಗಳಲ್ಲಿ ಬೆಳಗ್ಗೆ ಟ್ರಾಫಿಕ್ ಜಾಮ್ ಉಂಟಾಯಿತು. ಅನೇಕ ಕಡೆಗಳಲ್ಲಿ ಪಥ ಸಂಚಲನದ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆ ಕೂಡ ಮಾಡಲಾಗಿತ್ತು.


ಕಳೆದ ಕೆಲವು ದಿನಗಳಿಂದ ಕೆಲವು ವಿಷಯಗಳು ಗೊಂದಲ ಮೂಡಿಸುವ ಹಿನ್ನೆಲೆಯಲ್ಲಿ ಅದಕ್ಕೆ ಪೂರಕವಾಗಿ ಜನತೆಯಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಹಾಗೂ ಶಾಲಾ ಕಾಲೇಜುಗಳು ಪರಿಸರದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಇದನ್ನು ಆಯೋಜಿಸಲಾಗಿದೆ ಎಂದು ಪೊಲೀಸ್  ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು