5:39 PM Monday13 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಶಾಂತಿಯುತ ಲೋಕಸಭೆ ಎಲೆಕ್ಷನ್: ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ 10 ಮಂದಿ ಗಡಿಪಾರು

22/03/2024, 00:18

ಮಂಗಳೂರು(reporterkarnataka.com): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತೆ 10 ಮಂದಿಯನ್ನು ಗಡಿಪಾರು ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಗಡಿಪಾರು ಆದವರ ಸಂಖ್ಯೆ 26ಕ್ಕೇರಿದೆ.
ಹಲ್ಲೆ, ದೊಂಬಿ, ಅಶಾಂತಿ ಸೃಷ್ಟಿ,ಕ್ರಿಮಿನಲ್‌ ಸಂಚು ಹೂಡುವಿಕೆ, ಕೊಲೆ ಯತ್ನ ಇತ್ಯಾದಿ ಪ್ರಕರಣಗಳನ್ನು ಹೊಂದಿರುವ ಆರೋಪಿಗಳನ್ನು ಗಡೀಪಾರು ಮಾಡಲಾಗಿದೆ. ಕಸಬಾ ಬೆಂಗ್ರೆಯ ಮೊಹಮ್ಮದ್‌ ಸುಹೈಲ್‌ (21), ಕಣ್ಣೂರು ಕೊಡಕ್ಕಲ್‌ನ ನಿಕ್ಷಿತ್‌ ಪೂಜಾರಿ (21), ಉಳ್ಳಾಲ ಸೋಮೇಶ್ವರದ ಸುನಿಲ್‌ (24), ಉಳ್ಳಾಲ ಬಸ್ತಿಪಡುವಿನ ಯತೀಶ್‌ (46), ಮೂಲ್ಕಿ ಕಾರ್ನಾಡು ಬಿಜಾಪುರ ಕಾಲನಿಯ ಧರ್ಮಲಿಂಗ (34), ಕಣ್ಣೂರಿನ ಮೊಹಮ್ಮದ್‌ ಹನೀಜ್‌ (32), ಮೂಲ್ಕಿ ಚಿತ್ರಾಪುರದ ತೇಜಪಾಲ್‌ ಆರ್‌. ಕುಕ್ಯಾನ್‌ (40), ವಾಮಂಜೂರು ಉಳಾçಬೆಟ್ಟು ಮೊಹಮ್ಮದ್‌ ಅನ್ಸಾರ್‌ (31), ಪಾಂಡೇಶ್ವರ ಶಿವನಗರದ ಅಭಿಷೇಕ್‌ (29) ಎಂಬವರನ್ನು ಗಡೀಪಾರು ಮಾಡಲಾಗಿದೆ. ಇದುವರೆಗೆ 26 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಶಾಂತಿಯುತ ಚುನಾವಣೆ ನಡೆಯುವುದಕ್ಕಾಗಿ ಇವರೆಲ್ಲರನ್ನೂ ವಿವಿಧ ಜಿಲ್ಲೆಗಳಿಗೆ ಗಡೀಪಾರು ಮಾಡಲಾಗಿದೆ. ಅಲ್ಲದೆ ಶಾಂತಿಕಾಪಾಡುವುದು, ಉತ್ತಮ ವರ್ತನೆಗಾಗಿ 381 ಮಂದಿಯಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು