8:07 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಶಾಂತಿಯುತ ಲೋಕಸಭೆ ಎಲೆಕ್ಷನ್: ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ 10 ಮಂದಿ ಗಡಿಪಾರು

22/03/2024, 00:18

ಮಂಗಳೂರು(reporterkarnataka.com): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತೆ 10 ಮಂದಿಯನ್ನು ಗಡಿಪಾರು ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಗಡಿಪಾರು ಆದವರ ಸಂಖ್ಯೆ 26ಕ್ಕೇರಿದೆ.
ಹಲ್ಲೆ, ದೊಂಬಿ, ಅಶಾಂತಿ ಸೃಷ್ಟಿ,ಕ್ರಿಮಿನಲ್‌ ಸಂಚು ಹೂಡುವಿಕೆ, ಕೊಲೆ ಯತ್ನ ಇತ್ಯಾದಿ ಪ್ರಕರಣಗಳನ್ನು ಹೊಂದಿರುವ ಆರೋಪಿಗಳನ್ನು ಗಡೀಪಾರು ಮಾಡಲಾಗಿದೆ. ಕಸಬಾ ಬೆಂಗ್ರೆಯ ಮೊಹಮ್ಮದ್‌ ಸುಹೈಲ್‌ (21), ಕಣ್ಣೂರು ಕೊಡಕ್ಕಲ್‌ನ ನಿಕ್ಷಿತ್‌ ಪೂಜಾರಿ (21), ಉಳ್ಳಾಲ ಸೋಮೇಶ್ವರದ ಸುನಿಲ್‌ (24), ಉಳ್ಳಾಲ ಬಸ್ತಿಪಡುವಿನ ಯತೀಶ್‌ (46), ಮೂಲ್ಕಿ ಕಾರ್ನಾಡು ಬಿಜಾಪುರ ಕಾಲನಿಯ ಧರ್ಮಲಿಂಗ (34), ಕಣ್ಣೂರಿನ ಮೊಹಮ್ಮದ್‌ ಹನೀಜ್‌ (32), ಮೂಲ್ಕಿ ಚಿತ್ರಾಪುರದ ತೇಜಪಾಲ್‌ ಆರ್‌. ಕುಕ್ಯಾನ್‌ (40), ವಾಮಂಜೂರು ಉಳಾçಬೆಟ್ಟು ಮೊಹಮ್ಮದ್‌ ಅನ್ಸಾರ್‌ (31), ಪಾಂಡೇಶ್ವರ ಶಿವನಗರದ ಅಭಿಷೇಕ್‌ (29) ಎಂಬವರನ್ನು ಗಡೀಪಾರು ಮಾಡಲಾಗಿದೆ. ಇದುವರೆಗೆ 26 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಶಾಂತಿಯುತ ಚುನಾವಣೆ ನಡೆಯುವುದಕ್ಕಾಗಿ ಇವರೆಲ್ಲರನ್ನೂ ವಿವಿಧ ಜಿಲ್ಲೆಗಳಿಗೆ ಗಡೀಪಾರು ಮಾಡಲಾಗಿದೆ. ಅಲ್ಲದೆ ಶಾಂತಿಕಾಪಾಡುವುದು, ಉತ್ತಮ ವರ್ತನೆಗಾಗಿ 381 ಮಂದಿಯಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು