12:38 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಶಾಂತಿಯುತ ಲೋಕಸಭೆ ಎಲೆಕ್ಷನ್: ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ 10 ಮಂದಿ ಗಡಿಪಾರು

22/03/2024, 00:18

ಮಂಗಳೂರು(reporterkarnataka.com): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತೆ 10 ಮಂದಿಯನ್ನು ಗಡಿಪಾರು ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಗಡಿಪಾರು ಆದವರ ಸಂಖ್ಯೆ 26ಕ್ಕೇರಿದೆ.
ಹಲ್ಲೆ, ದೊಂಬಿ, ಅಶಾಂತಿ ಸೃಷ್ಟಿ,ಕ್ರಿಮಿನಲ್‌ ಸಂಚು ಹೂಡುವಿಕೆ, ಕೊಲೆ ಯತ್ನ ಇತ್ಯಾದಿ ಪ್ರಕರಣಗಳನ್ನು ಹೊಂದಿರುವ ಆರೋಪಿಗಳನ್ನು ಗಡೀಪಾರು ಮಾಡಲಾಗಿದೆ. ಕಸಬಾ ಬೆಂಗ್ರೆಯ ಮೊಹಮ್ಮದ್‌ ಸುಹೈಲ್‌ (21), ಕಣ್ಣೂರು ಕೊಡಕ್ಕಲ್‌ನ ನಿಕ್ಷಿತ್‌ ಪೂಜಾರಿ (21), ಉಳ್ಳಾಲ ಸೋಮೇಶ್ವರದ ಸುನಿಲ್‌ (24), ಉಳ್ಳಾಲ ಬಸ್ತಿಪಡುವಿನ ಯತೀಶ್‌ (46), ಮೂಲ್ಕಿ ಕಾರ್ನಾಡು ಬಿಜಾಪುರ ಕಾಲನಿಯ ಧರ್ಮಲಿಂಗ (34), ಕಣ್ಣೂರಿನ ಮೊಹಮ್ಮದ್‌ ಹನೀಜ್‌ (32), ಮೂಲ್ಕಿ ಚಿತ್ರಾಪುರದ ತೇಜಪಾಲ್‌ ಆರ್‌. ಕುಕ್ಯಾನ್‌ (40), ವಾಮಂಜೂರು ಉಳಾçಬೆಟ್ಟು ಮೊಹಮ್ಮದ್‌ ಅನ್ಸಾರ್‌ (31), ಪಾಂಡೇಶ್ವರ ಶಿವನಗರದ ಅಭಿಷೇಕ್‌ (29) ಎಂಬವರನ್ನು ಗಡೀಪಾರು ಮಾಡಲಾಗಿದೆ. ಇದುವರೆಗೆ 26 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಶಾಂತಿಯುತ ಚುನಾವಣೆ ನಡೆಯುವುದಕ್ಕಾಗಿ ಇವರೆಲ್ಲರನ್ನೂ ವಿವಿಧ ಜಿಲ್ಲೆಗಳಿಗೆ ಗಡೀಪಾರು ಮಾಡಲಾಗಿದೆ. ಅಲ್ಲದೆ ಶಾಂತಿಕಾಪಾಡುವುದು, ಉತ್ತಮ ವರ್ತನೆಗಾಗಿ 381 ಮಂದಿಯಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು