8:29 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಶಾಂತಿಯುತ ಲೋಕಸಭೆ ಎಲೆಕ್ಷನ್: ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ 10 ಮಂದಿ ಗಡಿಪಾರು

22/03/2024, 00:18

ಮಂಗಳೂರು(reporterkarnataka.com): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತೆ 10 ಮಂದಿಯನ್ನು ಗಡಿಪಾರು ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಗಡಿಪಾರು ಆದವರ ಸಂಖ್ಯೆ 26ಕ್ಕೇರಿದೆ.
ಹಲ್ಲೆ, ದೊಂಬಿ, ಅಶಾಂತಿ ಸೃಷ್ಟಿ,ಕ್ರಿಮಿನಲ್‌ ಸಂಚು ಹೂಡುವಿಕೆ, ಕೊಲೆ ಯತ್ನ ಇತ್ಯಾದಿ ಪ್ರಕರಣಗಳನ್ನು ಹೊಂದಿರುವ ಆರೋಪಿಗಳನ್ನು ಗಡೀಪಾರು ಮಾಡಲಾಗಿದೆ. ಕಸಬಾ ಬೆಂಗ್ರೆಯ ಮೊಹಮ್ಮದ್‌ ಸುಹೈಲ್‌ (21), ಕಣ್ಣೂರು ಕೊಡಕ್ಕಲ್‌ನ ನಿಕ್ಷಿತ್‌ ಪೂಜಾರಿ (21), ಉಳ್ಳಾಲ ಸೋಮೇಶ್ವರದ ಸುನಿಲ್‌ (24), ಉಳ್ಳಾಲ ಬಸ್ತಿಪಡುವಿನ ಯತೀಶ್‌ (46), ಮೂಲ್ಕಿ ಕಾರ್ನಾಡು ಬಿಜಾಪುರ ಕಾಲನಿಯ ಧರ್ಮಲಿಂಗ (34), ಕಣ್ಣೂರಿನ ಮೊಹಮ್ಮದ್‌ ಹನೀಜ್‌ (32), ಮೂಲ್ಕಿ ಚಿತ್ರಾಪುರದ ತೇಜಪಾಲ್‌ ಆರ್‌. ಕುಕ್ಯಾನ್‌ (40), ವಾಮಂಜೂರು ಉಳಾçಬೆಟ್ಟು ಮೊಹಮ್ಮದ್‌ ಅನ್ಸಾರ್‌ (31), ಪಾಂಡೇಶ್ವರ ಶಿವನಗರದ ಅಭಿಷೇಕ್‌ (29) ಎಂಬವರನ್ನು ಗಡೀಪಾರು ಮಾಡಲಾಗಿದೆ. ಇದುವರೆಗೆ 26 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಶಾಂತಿಯುತ ಚುನಾವಣೆ ನಡೆಯುವುದಕ್ಕಾಗಿ ಇವರೆಲ್ಲರನ್ನೂ ವಿವಿಧ ಜಿಲ್ಲೆಗಳಿಗೆ ಗಡೀಪಾರು ಮಾಡಲಾಗಿದೆ. ಅಲ್ಲದೆ ಶಾಂತಿಕಾಪಾಡುವುದು, ಉತ್ತಮ ವರ್ತನೆಗಾಗಿ 381 ಮಂದಿಯಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು