6:49 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಶಾಂತಿಯುತ ಲೋಕಸಭೆ ಎಲೆಕ್ಷನ್: ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ 10 ಮಂದಿ ಗಡಿಪಾರು

22/03/2024, 00:18

ಮಂಗಳೂರು(reporterkarnataka.com): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತೆ 10 ಮಂದಿಯನ್ನು ಗಡಿಪಾರು ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಗಡಿಪಾರು ಆದವರ ಸಂಖ್ಯೆ 26ಕ್ಕೇರಿದೆ.
ಹಲ್ಲೆ, ದೊಂಬಿ, ಅಶಾಂತಿ ಸೃಷ್ಟಿ,ಕ್ರಿಮಿನಲ್‌ ಸಂಚು ಹೂಡುವಿಕೆ, ಕೊಲೆ ಯತ್ನ ಇತ್ಯಾದಿ ಪ್ರಕರಣಗಳನ್ನು ಹೊಂದಿರುವ ಆರೋಪಿಗಳನ್ನು ಗಡೀಪಾರು ಮಾಡಲಾಗಿದೆ. ಕಸಬಾ ಬೆಂಗ್ರೆಯ ಮೊಹಮ್ಮದ್‌ ಸುಹೈಲ್‌ (21), ಕಣ್ಣೂರು ಕೊಡಕ್ಕಲ್‌ನ ನಿಕ್ಷಿತ್‌ ಪೂಜಾರಿ (21), ಉಳ್ಳಾಲ ಸೋಮೇಶ್ವರದ ಸುನಿಲ್‌ (24), ಉಳ್ಳಾಲ ಬಸ್ತಿಪಡುವಿನ ಯತೀಶ್‌ (46), ಮೂಲ್ಕಿ ಕಾರ್ನಾಡು ಬಿಜಾಪುರ ಕಾಲನಿಯ ಧರ್ಮಲಿಂಗ (34), ಕಣ್ಣೂರಿನ ಮೊಹಮ್ಮದ್‌ ಹನೀಜ್‌ (32), ಮೂಲ್ಕಿ ಚಿತ್ರಾಪುರದ ತೇಜಪಾಲ್‌ ಆರ್‌. ಕುಕ್ಯಾನ್‌ (40), ವಾಮಂಜೂರು ಉಳಾçಬೆಟ್ಟು ಮೊಹಮ್ಮದ್‌ ಅನ್ಸಾರ್‌ (31), ಪಾಂಡೇಶ್ವರ ಶಿವನಗರದ ಅಭಿಷೇಕ್‌ (29) ಎಂಬವರನ್ನು ಗಡೀಪಾರು ಮಾಡಲಾಗಿದೆ. ಇದುವರೆಗೆ 26 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಶಾಂತಿಯುತ ಚುನಾವಣೆ ನಡೆಯುವುದಕ್ಕಾಗಿ ಇವರೆಲ್ಲರನ್ನೂ ವಿವಿಧ ಜಿಲ್ಲೆಗಳಿಗೆ ಗಡೀಪಾರು ಮಾಡಲಾಗಿದೆ. ಅಲ್ಲದೆ ಶಾಂತಿಕಾಪಾಡುವುದು, ಉತ್ತಮ ವರ್ತನೆಗಾಗಿ 381 ಮಂದಿಯಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು