7:07 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಶಾಂತಿಯುತ ಲೋಕಸಭೆ ಎಲೆಕ್ಷನ್: ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ 10 ಮಂದಿ ಗಡಿಪಾರು

22/03/2024, 00:18

ಮಂಗಳೂರು(reporterkarnataka.com): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತೆ 10 ಮಂದಿಯನ್ನು ಗಡಿಪಾರು ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಗಡಿಪಾರು ಆದವರ ಸಂಖ್ಯೆ 26ಕ್ಕೇರಿದೆ.
ಹಲ್ಲೆ, ದೊಂಬಿ, ಅಶಾಂತಿ ಸೃಷ್ಟಿ,ಕ್ರಿಮಿನಲ್‌ ಸಂಚು ಹೂಡುವಿಕೆ, ಕೊಲೆ ಯತ್ನ ಇತ್ಯಾದಿ ಪ್ರಕರಣಗಳನ್ನು ಹೊಂದಿರುವ ಆರೋಪಿಗಳನ್ನು ಗಡೀಪಾರು ಮಾಡಲಾಗಿದೆ. ಕಸಬಾ ಬೆಂಗ್ರೆಯ ಮೊಹಮ್ಮದ್‌ ಸುಹೈಲ್‌ (21), ಕಣ್ಣೂರು ಕೊಡಕ್ಕಲ್‌ನ ನಿಕ್ಷಿತ್‌ ಪೂಜಾರಿ (21), ಉಳ್ಳಾಲ ಸೋಮೇಶ್ವರದ ಸುನಿಲ್‌ (24), ಉಳ್ಳಾಲ ಬಸ್ತಿಪಡುವಿನ ಯತೀಶ್‌ (46), ಮೂಲ್ಕಿ ಕಾರ್ನಾಡು ಬಿಜಾಪುರ ಕಾಲನಿಯ ಧರ್ಮಲಿಂಗ (34), ಕಣ್ಣೂರಿನ ಮೊಹಮ್ಮದ್‌ ಹನೀಜ್‌ (32), ಮೂಲ್ಕಿ ಚಿತ್ರಾಪುರದ ತೇಜಪಾಲ್‌ ಆರ್‌. ಕುಕ್ಯಾನ್‌ (40), ವಾಮಂಜೂರು ಉಳಾçಬೆಟ್ಟು ಮೊಹಮ್ಮದ್‌ ಅನ್ಸಾರ್‌ (31), ಪಾಂಡೇಶ್ವರ ಶಿವನಗರದ ಅಭಿಷೇಕ್‌ (29) ಎಂಬವರನ್ನು ಗಡೀಪಾರು ಮಾಡಲಾಗಿದೆ. ಇದುವರೆಗೆ 26 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಶಾಂತಿಯುತ ಚುನಾವಣೆ ನಡೆಯುವುದಕ್ಕಾಗಿ ಇವರೆಲ್ಲರನ್ನೂ ವಿವಿಧ ಜಿಲ್ಲೆಗಳಿಗೆ ಗಡೀಪಾರು ಮಾಡಲಾಗಿದೆ. ಅಲ್ಲದೆ ಶಾಂತಿಕಾಪಾಡುವುದು, ಉತ್ತಮ ವರ್ತನೆಗಾಗಿ 381 ಮಂದಿಯಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು