9:12 PM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಶಾಂತಿಯುತ ಲೋಕಸಭೆ ಎಲೆಕ್ಷನ್: ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ 10 ಮಂದಿ ಗಡಿಪಾರು

22/03/2024, 00:18

ಮಂಗಳೂರು(reporterkarnataka.com): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತೆ 10 ಮಂದಿಯನ್ನು ಗಡಿಪಾರು ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಗಡಿಪಾರು ಆದವರ ಸಂಖ್ಯೆ 26ಕ್ಕೇರಿದೆ.
ಹಲ್ಲೆ, ದೊಂಬಿ, ಅಶಾಂತಿ ಸೃಷ್ಟಿ,ಕ್ರಿಮಿನಲ್‌ ಸಂಚು ಹೂಡುವಿಕೆ, ಕೊಲೆ ಯತ್ನ ಇತ್ಯಾದಿ ಪ್ರಕರಣಗಳನ್ನು ಹೊಂದಿರುವ ಆರೋಪಿಗಳನ್ನು ಗಡೀಪಾರು ಮಾಡಲಾಗಿದೆ. ಕಸಬಾ ಬೆಂಗ್ರೆಯ ಮೊಹಮ್ಮದ್‌ ಸುಹೈಲ್‌ (21), ಕಣ್ಣೂರು ಕೊಡಕ್ಕಲ್‌ನ ನಿಕ್ಷಿತ್‌ ಪೂಜಾರಿ (21), ಉಳ್ಳಾಲ ಸೋಮೇಶ್ವರದ ಸುನಿಲ್‌ (24), ಉಳ್ಳಾಲ ಬಸ್ತಿಪಡುವಿನ ಯತೀಶ್‌ (46), ಮೂಲ್ಕಿ ಕಾರ್ನಾಡು ಬಿಜಾಪುರ ಕಾಲನಿಯ ಧರ್ಮಲಿಂಗ (34), ಕಣ್ಣೂರಿನ ಮೊಹಮ್ಮದ್‌ ಹನೀಜ್‌ (32), ಮೂಲ್ಕಿ ಚಿತ್ರಾಪುರದ ತೇಜಪಾಲ್‌ ಆರ್‌. ಕುಕ್ಯಾನ್‌ (40), ವಾಮಂಜೂರು ಉಳಾçಬೆಟ್ಟು ಮೊಹಮ್ಮದ್‌ ಅನ್ಸಾರ್‌ (31), ಪಾಂಡೇಶ್ವರ ಶಿವನಗರದ ಅಭಿಷೇಕ್‌ (29) ಎಂಬವರನ್ನು ಗಡೀಪಾರು ಮಾಡಲಾಗಿದೆ. ಇದುವರೆಗೆ 26 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಶಾಂತಿಯುತ ಚುನಾವಣೆ ನಡೆಯುವುದಕ್ಕಾಗಿ ಇವರೆಲ್ಲರನ್ನೂ ವಿವಿಧ ಜಿಲ್ಲೆಗಳಿಗೆ ಗಡೀಪಾರು ಮಾಡಲಾಗಿದೆ. ಅಲ್ಲದೆ ಶಾಂತಿಕಾಪಾಡುವುದು, ಉತ್ತಮ ವರ್ತನೆಗಾಗಿ 381 ಮಂದಿಯಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು