10:52 PM Friday6 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಶಾಸಕರ ಆಪ್ತನಿಂದ ಶಾಲಾ ಮೈದಾನದಲ್ಲೇ ರಸ್ತೆ ನಿರ್ಮಿಸಲು ಯತ್ನ!: ಜೆಸಿಬಿಗೆ ಅಡ್ಡ ನಿಂತು ಶಾಲಾ ಮಕ್ಕಳ- ಪೋಷಕರ ಪ್ರತಿಭಟನೆ

31/01/2025, 15:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಸ್ಥಳೀಯ ಶಾಸಕರ ಆಪ್ತನ ಮನೆಯ ಗೃಹಪ್ರವೇಶಕ್ಕಾಗಿ ಶಾಲಾ ಕ್ರೀಡಾಂಗಣದಲ್ಲಿ ರಸ್ತೆ ನಿರ್ಮಿಸಲು ಮುಂದಾದ ಕ್ರಮವನ್ನು ವಿರೋಧಿಸಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಜೇಸಿಬಿಗೆ ಅಡ್ಡ ನಿಂತು ಪ್ರತಿಭಟಿಸಿದ ಘಟನೆ ಕಡೂರು ತಾಲೂಕಿನ ಚೌಳಹಿರಿಯೂರು ಸಮೀಪದ ಹಡಗಲು ಗ್ರಾಮದಲ್ಲಿ ನಡೆದಿದೆ.
ಪೋಷಕರು ಮತ್ತು ಶಾಲಾ ಮಕ್ಕಳಿಂದ ಜೆಸಿಬಿಗೆ ಅಡ್ಡ ನಿಂತು ಪ್ರತಿಭಟನೆ ನಡೆಸಿದರು.
ಶಾಲೆ ಒಡೆದು ಹಾಕಿ, ಗ್ರೌಂಡ್ ನಲ್ಲಿ ರಸ್ತೆ ಮಾಡಿ ಅಂತ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದರು.


ಕಾಂಗ್ರೆಸ್ ಕಾರ್ಯಕರ್ತ ಪ್ರಮೋದ್ ಎಂಬುವರ ಮನೆ ಗೃಹಪ್ರವೇಶಕ್ಕೆ ಶಾಲಾ ಆವರಣದಲ್ಲಿ ರಸ್ತೆ ನಿರ್ಮಿಸುವ ಪ್ರಯತ್ನ ನಡೆದಿತ್ತು. ವಿಲೇಜ್ ಅಕೌಂಟೆಂಟ್ ಸ್ಥಳದಲ್ಲಿ ನಿಂತು ರಸ್ತೆ ಮಾಡಿಸಲು ಮುಂದಾಗಿದ್ದರು. ಫೆಬ್ರವರಿ 6 ರಂದು ಪ್ರಮೋದ್ ಅವರ ಗೃಹಪ್ರವೇಶ ನಡೆಯಲಿದೆ.
ಸರ್ಕಾರಿ ಶಾಲೆಯ ಕ್ರೀಡಾಂಗಣಕ್ಕೆಂದು 18 ಗುಂಟೆ ಗೋಮಾಳ ಜಾಗ ಮೀಸಲು ಇಡಲಾಗಿದೆ. ಮನೆಗೆ ಬೇರೆ ದಾರಿ ಇದ್ದರೂ ಕೂಡ
ಕ್ರೀಡಾಂಗಣದಲ್ಲಿ ರಸ್ತೆ ನಿರ್ಮಾಣಕ್ಕೆ ಅಧಿಕಾರಿಗಳು
ಮುಂದಾಗಿದ್ದರು. ಕಡೂರು ಶಾಸಕ ಆನಂದ್ ಅವರ ಆಪ್ತ ಎಂದು ಅಧಿಕಾರಿಗಳು ಮೌನ ವಹಿಸಿದ್ದರು ಎಂಬ ಆರೋಪ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು