7:17 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಶಾಸಕರ ಆಪ್ತನಿಂದ ಶಾಲಾ ಮೈದಾನದಲ್ಲೇ ರಸ್ತೆ ನಿರ್ಮಿಸಲು ಯತ್ನ!: ಜೆಸಿಬಿಗೆ ಅಡ್ಡ ನಿಂತು ಶಾಲಾ ಮಕ್ಕಳ- ಪೋಷಕರ ಪ್ರತಿಭಟನೆ

31/01/2025, 15:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಸ್ಥಳೀಯ ಶಾಸಕರ ಆಪ್ತನ ಮನೆಯ ಗೃಹಪ್ರವೇಶಕ್ಕಾಗಿ ಶಾಲಾ ಕ್ರೀಡಾಂಗಣದಲ್ಲಿ ರಸ್ತೆ ನಿರ್ಮಿಸಲು ಮುಂದಾದ ಕ್ರಮವನ್ನು ವಿರೋಧಿಸಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಜೇಸಿಬಿಗೆ ಅಡ್ಡ ನಿಂತು ಪ್ರತಿಭಟಿಸಿದ ಘಟನೆ ಕಡೂರು ತಾಲೂಕಿನ ಚೌಳಹಿರಿಯೂರು ಸಮೀಪದ ಹಡಗಲು ಗ್ರಾಮದಲ್ಲಿ ನಡೆದಿದೆ.
ಪೋಷಕರು ಮತ್ತು ಶಾಲಾ ಮಕ್ಕಳಿಂದ ಜೆಸಿಬಿಗೆ ಅಡ್ಡ ನಿಂತು ಪ್ರತಿಭಟನೆ ನಡೆಸಿದರು.
ಶಾಲೆ ಒಡೆದು ಹಾಕಿ, ಗ್ರೌಂಡ್ ನಲ್ಲಿ ರಸ್ತೆ ಮಾಡಿ ಅಂತ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದರು.


ಕಾಂಗ್ರೆಸ್ ಕಾರ್ಯಕರ್ತ ಪ್ರಮೋದ್ ಎಂಬುವರ ಮನೆ ಗೃಹಪ್ರವೇಶಕ್ಕೆ ಶಾಲಾ ಆವರಣದಲ್ಲಿ ರಸ್ತೆ ನಿರ್ಮಿಸುವ ಪ್ರಯತ್ನ ನಡೆದಿತ್ತು. ವಿಲೇಜ್ ಅಕೌಂಟೆಂಟ್ ಸ್ಥಳದಲ್ಲಿ ನಿಂತು ರಸ್ತೆ ಮಾಡಿಸಲು ಮುಂದಾಗಿದ್ದರು. ಫೆಬ್ರವರಿ 6 ರಂದು ಪ್ರಮೋದ್ ಅವರ ಗೃಹಪ್ರವೇಶ ನಡೆಯಲಿದೆ.
ಸರ್ಕಾರಿ ಶಾಲೆಯ ಕ್ರೀಡಾಂಗಣಕ್ಕೆಂದು 18 ಗುಂಟೆ ಗೋಮಾಳ ಜಾಗ ಮೀಸಲು ಇಡಲಾಗಿದೆ. ಮನೆಗೆ ಬೇರೆ ದಾರಿ ಇದ್ದರೂ ಕೂಡ
ಕ್ರೀಡಾಂಗಣದಲ್ಲಿ ರಸ್ತೆ ನಿರ್ಮಾಣಕ್ಕೆ ಅಧಿಕಾರಿಗಳು
ಮುಂದಾಗಿದ್ದರು. ಕಡೂರು ಶಾಸಕ ಆನಂದ್ ಅವರ ಆಪ್ತ ಎಂದು ಅಧಿಕಾರಿಗಳು ಮೌನ ವಹಿಸಿದ್ದರು ಎಂಬ ಆರೋಪ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು