5:21 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಶಾಸಕ ಸಿ.ಟಿ. ರವಿ ಮೇಲೆ ಗೂಂಡಾಗಳ ದಾಳಿ: ಸಂಸದ ಕ್ಯಾಷ್ಟನ್ ಬ್ರಿಜೇಶ್ ಚೌಟ ತೀವ್ರ ಖಂಡನೆ

20/12/2024, 12:57

ಮಂಗಳೂರು(reporterkarnataka.com):ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬೆಂಬಲಿಗರು ಅಧಿವೇಶದ ನಡುವೆಯೇ ಮಾರಣಾಂತಿಕ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಒಬ್ಬ ಜನಪ್ರತಿನಿಧಿಯ ಮೇಲೆಯೇ ನಿರ್ಭಯವಾಗಿ ಅದರಲ್ಲಿಯೂ ಅತ್ಯಂತ ಗೌರವದ ಸ್ಥಳವಾದ ಸುವರ್ಣ ಸೌಧದ ಮೊಗಸಾಲೆಯಲ್ಲೇ ಕೈ ಮಾಡಲು ಯತ್ನಿಸಿದ ಕಾಂಗ್ರೆಸ್ ಪಾರ್ಟಿ ಪ್ರೇರಿತ ಗೂಂಡಾಗಳು ಜನಸಾಮಾನ್ಯರ ಜೊತೆ ಯಾವ ರೀತಿ ವರ್ತಿಸಬಹುದು ಎಂಬುವುದಕ್ಕೆ ಈ ಘಟನೆಯೇ ಸಾಕ್ಷಿ. ಈ ರಾಜ್ಯದ ಜನರಿಗೆ ಕಾನೂನಿನ ಮೇಲೆ ನಂಬಿಕೆ ಉಳಿಯಬೇಕೆಂದರೆ ಈ ಘಟನೆಗೆ ಸಂಬಂಧಿಸಿದ ಗೂಂಡಾಗಳನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಬಂಧಿಸುವುದು ಮಾತ್ರವಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಸಿ.ಟಿ. ರವಿ ಅವರನ್ನು ಸದನದೊಳಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕೊಲೆಗಾರ ಎಂಬುದಾಗಿ ಕರೆದಿರುವುದಾಗಿ ಕಾಂಗ್ರೆಸ್‌ ಶಾಸಕರೇ ಒಪ್ಪಿಕೊಂಡಿದ್ದಾರೆ. ಅಲ್ಲದೆ, ಸದನದೊಳಗೆ ತಾವು ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಅವಾಚ್ಯ ಪದ ಬಳಸಿಲ್ಲ ಎಂಬುದನ್ನು ಖುದ್ದು ಸಿಟಿ ರವಿ ಅವರೇ ಸ್ಪಷ್ಟಪಡಿಸಿದ್ದಾರೆ. ಈ ಘಟನೆಯ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಮೊದಲೇ ಈ ರೀತಿ ಶಾಸಕರೊಬ್ಬರ ಮೇಲೆ ರೌಡಿಸಂ ಪ್ರದರ್ಶಿಸಿರುವುದು ಅತ್ಯಂತ ಖೇದಕರ ಹಾಗೂ ಆತಂಕದ ವಿಚಾರ. ಇದು ಕಾಂಗ್ರೆಸ್‌ನವರ ಗೂಂಡಾಗಿರಿ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.
ಈ ಘಟನೆ ಬಗ್ಗೆ ಸತ್ಯಾ-ಸತ್ಯತೆಯನ್ನು ಪರಿಶೀಲಿಸದೆ ಪ್ರತಿಭಟನೆ ನಡೆಸುತ್ತಿದ್ದ ಸಿ.ಟಿ. ರವಿ ಅವರನ್ನು ಪೊಲೀಸರು ಸುವರ್ಣಸೌಧದ ಒಳಗಿನಿಂದಲೇ ವಶಕ್ಕೆ ಪಡೆದು ಕರೆದೊಯ್ದಿರುವುದು ಯಾವ ನ್ಯಾಯ? ಕಾಂಗ್ರೆಸ್‌ನವರ ಆಡಳಿತದಲ್ಲಿ ಸಿದ್ದರಾಮಯ್ಯನವರ ಸರ್ಕಾರವು ತಮ್ಮ ಮೂಗಿನ ನೇರಕ್ಕೆ ಕಾನೂನು ಹಾಗೂ ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಒಬ್ಬ ಜನಪ್ರತಿನಿಧಿಯನ್ನು ಏಕಾಏಕಿ ಅಕ್ರಮವಾಗಿ ಕರೆದುಕೊಂಡು ಹೋಗಿರುವುದನ್ನು ಬಿಜೆಪಿ ಪಕ್ಷ ಒಕ್ಕೊರಳಿನಿಂದ ಖಂಡಿಸುತ್ತದೆ. ಜತೆಗೆ ಕಾಂಗ್ರೆಸ್‌ನವರ ಈ ಗೂಂಡಾ ಆಡಳಿತದ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಕ್ಯಾ. ಚೌಟ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು