5:51 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಶಾಸಕ ಹರೀಶ್ ಪೂಂಜ ಬಂಧಿಸಲು ಹೋದ ಬೆಳ್ತಂಗಡಿ ಪೊಲೀಸರು ಬರಿಗೈಯಲ್ಲಿ ವಾಪಸ್: ನೋಟಿಸ್ ನೀಡಿ ಹಿಂತಿರುಗಿದ ಖಾಕಿ ಪಡೆ

22/05/2024, 22:48

ಬೆಳ್ತಂಗಡಿ(reporterkarnataka.com): ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರ ಬಂಧನನೋತ್ತರ ನಡೆದ ಘಟನೆಗಳಿಗೆ ಪೂರಕವಾಗಿ ದಾಖಲಾದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಲು ಹೋದ ಪೊಲೀಸರು ಶಾಸಕರಿಗೆ ನೋಟಿಸ್ ಕೊಟ್ಟು ಬರಿಗೈಯಲ್ಲಿ ವಾಪಸ್ ಬಂದ ಘಟನೆ ನಡೆದಿದೆ. ಈ ನಡುವೆ ನೋಟಿಸಿಗೆ ಉತ್ತರಿಸಲು ಶಾಸಕರು ಠಾಣೆಗೆ ಆಗಮಿಸಿದ್ದಾರೆ.
ಮೇಲಂತಬೆಟ್ಟು ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ, ಬಿಜೆಪಿ ಯುವ ಮೋರ್ಚಾದ ಶಶಿರಾಜ್ ಅವರ ಬಂಧನವನ್ನು ಪ್ರಶ್ನಿಸಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಗೆ ಹೋಗಿ ಪೊಲೀಸ್ ಠಾಣೆ ನಿಮ್ಮ ಅಪ್ಪಂದಾ? ಎಂದು ಸಬ್ ಇನ್ಸ್‌ಪೆಕ್ಟರ್ ಮುರಳೀಧರ ನಾಯಕ್ ಅವರಲ್ಲಿ ಪ್ರಶ್ನಿಸಿದ್ದರು. ನಂತರ ಠಾಣೆಯಲ್ಲಿ ರಾತ್ರಿ ಧರಣಿ ನಡೆಸಿದ್ದರು. ಮರುದಿನ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿಯನ್ನು ಡಿಜೆ ಹಳ್ಳಿ, ಕೆಜೆ ಹಳ್ಳಿ ಮಾಡುತ್ತೇನೆ ಎಂದು ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಾಗಿಸಲಾಗಿತ್ತು. ಶಾಸಕರ ಬಂಧನಕ್ಕೆ ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದರು. ಅಲ್ಲಿ ಬಿಜೆಪಿ ಸಂಸದರು, ಶಾಸಕರುಗಳು, ಹರೀಶ್ ಪೂಂಜ ಪರ ವಕೀಲರು ಹಾಗೂ ಅಪಾರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ನೆರೆದಿದ್ದರು. ಪೊಲೀಸ್ ಹಾಗೂ ಬಿಜೆಪಿ ನಾಯಕರ ನಡುವೆ ವಾದ- ಪ್ರತಿವಾದ ನಡೆಯಿತು. ನೋಟಿಸ್ ಕೊಟ್ಟು ಬಂಧಿಸಿ ಎಂದು ಬಿಜೆಪಿ ನಾಯಕರು ಹಾಗೂ ಪೂಂಜ ಪರ ವಕೀಲರು ವಾದಿಸಿದರು. ಕೊನೆಗೂ ಪೂಂಜ ಬಂಧನ ಸಾಧ್ಯವಾಗದೆ ಪೊಲೀಸರು ನೋಟಿಸ್ ನೀಡಿ ಬರಿಗೈಯಲ್ಲಿ ವಾಪಸಾದರು. ನಂತರ ಶಾಸಕರು ನೋಟಿಸಿಗೆ ಉತ್ತರಿಸಲು ಠಾಣೆಗೆ ಆಗಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು