8:16 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಶಾಸಕ ಹರೀಶ್ ಪೂಂಜ ಕಾರಿಗೆ ದಾಳಿ ನಡೆಸಲು ಯತ್ನಿಸಿದ ಆರೋಪಿ ಬಂಧನ: ವಾಹನ ವಶ

15/10/2022, 15:03

ಮಂಗಳೂರು(reporterkarnataka.com): ಫರಂಗಿಪೇಟೆ ಸಮೀಪ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರಿಗೆ ದಾಳಿ ನಡೆಸಲು ಯತ್ನಿಸಿದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಫರಿನ ರಿಯಾಜ್ (38) ಎಂದು ಗುರುತಿಸಲಾಗಿದೆ.
ಕೇರಳ ನೋಂದಾವಣಿಯ ಸ್ಕೋರ್ಪಿಯೋ ವಾಹನ ಕೂಡ ವಶಕ್ಕೆ ಪಡೆದಿದ್ದಾರೆ. ದೂರುದಾರರು ಕೂಡ ವಾಹನ ಮತ್ತು ಆರೋಪಿಯನ್ನು ಗುರುತಿಸಿದ್ದು, ಆರೋಪಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಮತ್ತು ಯಾವುದೇ ಪ್ರಕರಣಗಳು ಹಿಂದೆ ದಾಖಲಾಗಿಲ್ಲ ಜೊತೆಗೆ ಯಾವುದೇ ಮಾರಕಾಸ್ತ್ರ ಸಿಕ್ಕಿಲ್ಲ ಎಂದು ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಓವರ್ ಟೇಕ್ ವಿಚಾರದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರಿಗೆ ಅಡ್ಡಗಟ್ಟಿ, ತಲ್ವಾರ್ ಝಳಪಿಸಿದ್ದು, ಇದು ಕೊಲೆ ಯತ್ನ ಅಲ್ಲ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಕರಣದ ಬಳಿಕ ಜಿಲ್ಲಾ ಪೊಲೀಸ್ ಇಲಾಖೆ ತಮಗೆ ನೀಡಿದ್ದ ಗನ್ ಮ್ಯಾನ್‌ನನ್ನು ಶಾಸಕ ಹರೀಶ್ ಪೂಂಜಾ ವಾಪಸ್ ಕಳುಹಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ ದ.ಕ. ಜಿಲ್ಲಾ ಎಸ್‌ಪಿ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು