9:30 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶಾಸಕ ಹರೀಶ್ ಪೂಂಜ ಕಾರಿಗೆ ದಾಳಿ ನಡೆಸಲು ಯತ್ನಿಸಿದ ಆರೋಪಿ ಬಂಧನ: ವಾಹನ ವಶ

15/10/2022, 15:03

ಮಂಗಳೂರು(reporterkarnataka.com): ಫರಂಗಿಪೇಟೆ ಸಮೀಪ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರಿಗೆ ದಾಳಿ ನಡೆಸಲು ಯತ್ನಿಸಿದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಫರಿನ ರಿಯಾಜ್ (38) ಎಂದು ಗುರುತಿಸಲಾಗಿದೆ.
ಕೇರಳ ನೋಂದಾವಣಿಯ ಸ್ಕೋರ್ಪಿಯೋ ವಾಹನ ಕೂಡ ವಶಕ್ಕೆ ಪಡೆದಿದ್ದಾರೆ. ದೂರುದಾರರು ಕೂಡ ವಾಹನ ಮತ್ತು ಆರೋಪಿಯನ್ನು ಗುರುತಿಸಿದ್ದು, ಆರೋಪಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಮತ್ತು ಯಾವುದೇ ಪ್ರಕರಣಗಳು ಹಿಂದೆ ದಾಖಲಾಗಿಲ್ಲ ಜೊತೆಗೆ ಯಾವುದೇ ಮಾರಕಾಸ್ತ್ರ ಸಿಕ್ಕಿಲ್ಲ ಎಂದು ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಓವರ್ ಟೇಕ್ ವಿಚಾರದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರಿಗೆ ಅಡ್ಡಗಟ್ಟಿ, ತಲ್ವಾರ್ ಝಳಪಿಸಿದ್ದು, ಇದು ಕೊಲೆ ಯತ್ನ ಅಲ್ಲ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಕರಣದ ಬಳಿಕ ಜಿಲ್ಲಾ ಪೊಲೀಸ್ ಇಲಾಖೆ ತಮಗೆ ನೀಡಿದ್ದ ಗನ್ ಮ್ಯಾನ್‌ನನ್ನು ಶಾಸಕ ಹರೀಶ್ ಪೂಂಜಾ ವಾಪಸ್ ಕಳುಹಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ ದ.ಕ. ಜಿಲ್ಲಾ ಎಸ್‌ಪಿ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು