1:18 PM Sunday8 - February 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7…

ಇತ್ತೀಚಿನ ಸುದ್ದಿ

ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆ ಬಾಗಲೇ ಬೇಕು: ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸ್ಪಷ್ಟ ನುಡಿ

28/05/2024, 11:55

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆಬಾಗಲೇ ಬೇಕು. ನಾವು ನೋಟಿಸ್ ನೀಡಿದ್ದೇವೆ. ಅವರು ಸಮಯ ಕೇಳಿದ್ದಾರೆ. ಉಳಿದ ವಿಚಾರ ಅವರಿಗೆ ಬಿಟ್ಟದ್ದು ಎಂದು ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧಿಸಿದಂತೆ ಬಂಧಕ್ಕೀಡಾದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರ ಪರವಾಗಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಗೆ ಆಗಮಿಸಿ ಪೊಲೀಸರ ವಿರುದ್ಧ ಕೂಗಾಡಿದ್ದರು. ನಂತರ ನಡೆದ ಪ್ರತಿಭಟನೆಯಲ್ಲಿ ಡಿಜೆ ಹಳ್ಳಿ, ಕೆಜೆಹಳ್ಳಿ ತರಹ ಬೆಳ್ತಂಗಡಿಯನ್ನು ಮಾಡುತ್ತೇವೆ ಎಂದಿದ್ದರು. ಈ ಸಂಬಂಧ ಶಾಸಕರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿತ್ತು. ನಂತರ ನಡೆದ ಘಟನೆ ಕುರಿತು ಸ್ಪಷ್ಠೀಕರಣ ನೀಡಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಧರ್ಮಸ್ಥಳ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಶಾಸಕರ ಮನೆಗೆ ನೋಟಿಸ್ ನೀಡಲು ಆರಂಭದಲ್ಲಿ ಮೂವರು ಪೊಲೀಸರು ತೆರಳಿದ್ದರು. ಆದರೆ ಶಾಸಕರು ಠಾಣೆಗೆ ಬಾರದೆ ಅಲ್ಲಿ ಜನ ಸೇರಿಸಿರುವುದರಿಂದ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ಕಳುಹಿಸಬೇಕಾಯಿತು. ರಸ್ತೆ ಕಿರಿದಾಗಿರುವುದರಿಂದ ನೀವು ಅಲ್ಲಿಂದ ತೆರಳಿದರೆ ಜನರೂ ತೆರಳುತ್ತಾರೆ. ಆಗ ನಾವು ಠಾಣೆಗೆ ಹಾಜರಾಗುವುದಾಗಿ ತಿಳಿಸಿರುವುದರಿಂದ ಪೊಲೀಸರು ವಾಪಸ್ ಬಂದಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ಬೆಳ್ತಂಗಡಿ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸ್ಥಳದಲ್ಲಿ ಕೆಲಸಗಾರರು ಹೇಳಿದಂತೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಅಮಾಯಕ ಎನ್ನುವುದು ತಪ್ಪು. ಅವರವರ ಪ್ರಕಾರ ಎಲ್ಲರೂ ಅಮಾಯಕರೇ. ನ್ಯಾಯಾಲಯಕ್ಕೆ ಬೇಕಾಗಿರುವುದು ಸಾಕ್ಷಿ. ಅಮಾಯಕ ಅಲ್ಲ ಎನ್ನುವುದಕ್ಕೆ ಬೇಕಾದ ಸಾಕ್ಷಿಯನ್ನು ನೀಡುತ್ತೇವೆ. ತಹಶೀಲ್ದಾರರು ಪರಿಶೀಲಿಸಿ ವರದಿ ನೀಡಿದ್ದಾರೆ. ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು