5:43 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆ ಬಾಗಲೇ ಬೇಕು: ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸ್ಪಷ್ಟ ನುಡಿ

28/05/2024, 11:55

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆಬಾಗಲೇ ಬೇಕು. ನಾವು ನೋಟಿಸ್ ನೀಡಿದ್ದೇವೆ. ಅವರು ಸಮಯ ಕೇಳಿದ್ದಾರೆ. ಉಳಿದ ವಿಚಾರ ಅವರಿಗೆ ಬಿಟ್ಟದ್ದು ಎಂದು ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧಿಸಿದಂತೆ ಬಂಧಕ್ಕೀಡಾದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರ ಪರವಾಗಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಗೆ ಆಗಮಿಸಿ ಪೊಲೀಸರ ವಿರುದ್ಧ ಕೂಗಾಡಿದ್ದರು. ನಂತರ ನಡೆದ ಪ್ರತಿಭಟನೆಯಲ್ಲಿ ಡಿಜೆ ಹಳ್ಳಿ, ಕೆಜೆಹಳ್ಳಿ ತರಹ ಬೆಳ್ತಂಗಡಿಯನ್ನು ಮಾಡುತ್ತೇವೆ ಎಂದಿದ್ದರು. ಈ ಸಂಬಂಧ ಶಾಸಕರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿತ್ತು. ನಂತರ ನಡೆದ ಘಟನೆ ಕುರಿತು ಸ್ಪಷ್ಠೀಕರಣ ನೀಡಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಧರ್ಮಸ್ಥಳ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಶಾಸಕರ ಮನೆಗೆ ನೋಟಿಸ್ ನೀಡಲು ಆರಂಭದಲ್ಲಿ ಮೂವರು ಪೊಲೀಸರು ತೆರಳಿದ್ದರು. ಆದರೆ ಶಾಸಕರು ಠಾಣೆಗೆ ಬಾರದೆ ಅಲ್ಲಿ ಜನ ಸೇರಿಸಿರುವುದರಿಂದ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ಕಳುಹಿಸಬೇಕಾಯಿತು. ರಸ್ತೆ ಕಿರಿದಾಗಿರುವುದರಿಂದ ನೀವು ಅಲ್ಲಿಂದ ತೆರಳಿದರೆ ಜನರೂ ತೆರಳುತ್ತಾರೆ. ಆಗ ನಾವು ಠಾಣೆಗೆ ಹಾಜರಾಗುವುದಾಗಿ ತಿಳಿಸಿರುವುದರಿಂದ ಪೊಲೀಸರು ವಾಪಸ್ ಬಂದಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ಬೆಳ್ತಂಗಡಿ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸ್ಥಳದಲ್ಲಿ ಕೆಲಸಗಾರರು ಹೇಳಿದಂತೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಅಮಾಯಕ ಎನ್ನುವುದು ತಪ್ಪು. ಅವರವರ ಪ್ರಕಾರ ಎಲ್ಲರೂ ಅಮಾಯಕರೇ. ನ್ಯಾಯಾಲಯಕ್ಕೆ ಬೇಕಾಗಿರುವುದು ಸಾಕ್ಷಿ. ಅಮಾಯಕ ಅಲ್ಲ ಎನ್ನುವುದಕ್ಕೆ ಬೇಕಾದ ಸಾಕ್ಷಿಯನ್ನು ನೀಡುತ್ತೇವೆ. ತಹಶೀಲ್ದಾರರು ಪರಿಶೀಲಿಸಿ ವರದಿ ನೀಡಿದ್ದಾರೆ. ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು