11:26 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಶಾಸಕ ಜಮೀರ್ ಅಹಮದ್ ವಿದೇಶಿ ಹೂಡಿಕೆ ಮೇಲೆ ಎಸಿಬಿ ಕಣ್ಣು?: ಕರೆನ್ಸಿ ಕನ್ವರ್ಟ್‌ ವರದಿ ನೀಡಲು ಸೂಚನೆ?

09/08/2022, 14:13

ಬೆಂಗಳೂರು(reporterkarnataka.com):  ಕಾಂಗ್ರೆಸ್ ಶಾಸಕ ಜಮೀರ್‌ ಅಹಮದ್‌ ಖಾನ್‌ ಅವರ ಬೆನ್ನು ಹತ್ತಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಸದ್ಯ ಅವರ ಬಿಡುವ ಲಕ್ಷಣ ಕಂಡು ಬರುತ್ತಿಲ್ಲ. ಈಗಾಗಲೇ ದಾಳಿ ನಡೆಸಿರುವ ಎಸಿಬಿ ಜಮೀರ್ ಅವರ ವಿದೇಶಿ ಹೂಡಿಕೆ ಮೇಲೆ ಕಣ್ಣಿಟ್ಟಿದೆ.

ಈ ಹಿಂದೆ ಜಮೀರ್ ಅವರ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ.ಎಸಿಬಿ ಅಧಿಕಾರಿಗಳು, ಈಗ ಅವರ ವಿದೇಶಿ ಹೂಡಿಕೆಯನ್ನು ಕೆದಕಲು ಪ್ರಯತ್ನಿಸುತ್ತಿದೆ.

ಜಮೀರ್‌ ವಿದೇಶಗಳಲ್ಲಿ ಹೂಡಿಕೆ ಮಾಡಿರುವ ಬಗ್ಗೆ ಎಸಿಬಿಗೆ ಸುಳಿವು ಸಿಕ್ಕಿದ್ದು, ಇದರ ಬೆನ್ನಲ್ಲೇ ವಿದೇಶಿ ಪ್ರಯಾಣ, ವಿದೇಶದಲ್ಲಿ ಮಾಡಿರುವ ಖರ್ಚು, ಪಾಸ್‌ಪೋರ್ಟ್‌, ವಿದೇಶಕ್ಕೆ ಹೋಗುವ ಮುನ್ನ ಕರೆನ್ಸಿ ಕನ್ವರ್ಟ್‌ ಮಾಡಿರುವ ವರದಿ ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿದೇಶಕ್ಕೆ ಹೋದ ಸಂದರ್ಭದಲ್ಲಿ ಅಲ್ಲಿ ಬಳಕೆ ಮಾಡಿದ್ದ ಹಣದ ಮೂಲಗಳನ್ನು ತಿಳಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು