11:31 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಶಾಸಕ ಜಮೀರ್ ಅಹಮದ್ ವಿದೇಶಿ ಹೂಡಿಕೆ ಮೇಲೆ ಎಸಿಬಿ ಕಣ್ಣು?: ಕರೆನ್ಸಿ ಕನ್ವರ್ಟ್‌ ವರದಿ ನೀಡಲು ಸೂಚನೆ?

09/08/2022, 14:13

ಬೆಂಗಳೂರು(reporterkarnataka.com):  ಕಾಂಗ್ರೆಸ್ ಶಾಸಕ ಜಮೀರ್‌ ಅಹಮದ್‌ ಖಾನ್‌ ಅವರ ಬೆನ್ನು ಹತ್ತಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಸದ್ಯ ಅವರ ಬಿಡುವ ಲಕ್ಷಣ ಕಂಡು ಬರುತ್ತಿಲ್ಲ. ಈಗಾಗಲೇ ದಾಳಿ ನಡೆಸಿರುವ ಎಸಿಬಿ ಜಮೀರ್ ಅವರ ವಿದೇಶಿ ಹೂಡಿಕೆ ಮೇಲೆ ಕಣ್ಣಿಟ್ಟಿದೆ.

ಈ ಹಿಂದೆ ಜಮೀರ್ ಅವರ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ.ಎಸಿಬಿ ಅಧಿಕಾರಿಗಳು, ಈಗ ಅವರ ವಿದೇಶಿ ಹೂಡಿಕೆಯನ್ನು ಕೆದಕಲು ಪ್ರಯತ್ನಿಸುತ್ತಿದೆ.

ಜಮೀರ್‌ ವಿದೇಶಗಳಲ್ಲಿ ಹೂಡಿಕೆ ಮಾಡಿರುವ ಬಗ್ಗೆ ಎಸಿಬಿಗೆ ಸುಳಿವು ಸಿಕ್ಕಿದ್ದು, ಇದರ ಬೆನ್ನಲ್ಲೇ ವಿದೇಶಿ ಪ್ರಯಾಣ, ವಿದೇಶದಲ್ಲಿ ಮಾಡಿರುವ ಖರ್ಚು, ಪಾಸ್‌ಪೋರ್ಟ್‌, ವಿದೇಶಕ್ಕೆ ಹೋಗುವ ಮುನ್ನ ಕರೆನ್ಸಿ ಕನ್ವರ್ಟ್‌ ಮಾಡಿರುವ ವರದಿ ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿದೇಶಕ್ಕೆ ಹೋದ ಸಂದರ್ಭದಲ್ಲಿ ಅಲ್ಲಿ ಬಳಕೆ ಮಾಡಿದ್ದ ಹಣದ ಮೂಲಗಳನ್ನು ತಿಳಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು