7:16 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಶಾಸಕ ಮುನಿರತ್ನ ವಿರುದ್ಧ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ: ಮಾನವ ಸರಪಳಿ ನಡೆಸಿ ರಸ್ತೆ ತಡೆ

16/09/2024, 15:57

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜಾತಿ ನಿಂದನೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.


ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಮೈಸೂರು- ಊಟಿ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಶಾಸಕ ಮುನಿರತ್ನ ಬಿಜೆಪಿ ಪಕ್ಷದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಧಿಕ್ಕಾರದ ಘೋಷಣಾ ಫಲಕಗಳನ್ನಿಡಿದ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ಅವರ ಭಾವಚಿತ್ರ ಹಾಗೂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚುವ ಮೂಲಕ ತಮ್ಮ ಅಕ್ರೋಶ ವ್ಯಕ್ತಪಡಿಸಿದರು.
ರಸ್ತೆ ತಡೆಯಿಂದಾಗಿ ಕೆಲಕಾಲ ಮೈಸೂರು- ಊಟಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ ಘಟನೆಯನ್ನು ತೀವ್ರವಾಗಿ ಖಂಡಿಸಿ ಒಬ್ಬ ಜವಾಬ್ದಾರಿಯುತ ಶಾಸಕ ಈ ರೀತಿ ಜಾತಿ ಜಾತಿಗಳ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿರುವುದು ಅಕ್ಷಮ್ಯ ಅಪರಾಧ. ಸರ್ಕಾರ ಅವರನ್ನು ಬಂಧಿಸಿರುವುದು ಸ್ವಾಗತಾರ್ಹ. ಆದರೆ ಬಿಜೆಪಿ ಪಕ್ಷ ಮತ್ತು ಪಕ್ಷದ ವರಿಷ್ಠರು ಕೂಡಲೇ ಇವರನ್ನು ಪಕ್ಷದಿಂದ ಉಚ್ಚಾಟಿಸಿ ಶಾಸಕ ಸ್ಥಾನದಿಂದಲೇ ವಜಾಗೊಳಿಸ ಬೇಕು ಎಂದು ಒತ್ತಾಯಿಸಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಉಪಾಧ್ಯಕ್ಷೆ ರಿಯಾನಬಾನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್, ಅಶೋಕ್ , ಸೇರಿದಂತೆ ಮುಖಂಡರುಗಳಾದ ನಂದಕುಮಾರ್, ಮಂಜುನಾಥ್, ದೊರೆಸ್ವಾಮಿ, ಶ್ರೀಧರ್, ಸೌಭಾಗ್ಯ, ಮೀನಾಕ್ಷಿ, ಶಿವಣ್ಣ, ಬಾಲರಾಜ್, ಪುಟ್ಟಸ್ವಾಮಿ ಸೇರಿದಂತೆ ನೂರಾರು ಕಾರ್ಯಕರ್ತ ಮುಖಂಡರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು