6:28 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಶಾಸಕ ರಘುಪತಿ ಭಟ್ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ: ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ- ವಿರೋಧ ಪಕ್ಷದ ಸದಸ್ಯರ ಮಧ್ಯೆ ವಾಗ್ವಾದ

01/10/2022, 00:03

ಉಡುಪಿ(reporterkarnataka.com): ಮಲ್ಪೆ ರಾಷ್ಟೀಯ ಹೆದ್ದಾರಿ ದುರಸ್ತಿಗೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ ವಿರುದ್ಧದ ಶೇ.40 ಪರ್ಸೆಂಟ್ ಕಮಿಷನ್ ಆರೋಪ ವಿಚಾರ ಇಂದು ನಡೆದ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ವಿಷಯ ಪ್ರಸ್ತಾಪಿಸಿದ ಗಿರೀಶ್ ಅಂಚನ್, ವಿಪಕ್ಷ ನಾಯಕ ರಮೇಶ್ ಕಾಂಚನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಘುಪತಿ ಭಟ್ ವಿರುದ್ಧ ಶೇ.40ಪರ್ಸೆಂಟ್ ಕಮಿಷನ್ ಆರೋಪ ಮಾಡಲಾಗಿದೆ. ಇದು ಸತ್ಯ ವಿಚಾರವಲ್ಲ. ನಮ್ಮಲ್ಲಿ ಯಾರು ಕಮಿಷನ್ ಪಡೆದುಕೊಳುವುದಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ರಮೇಶ್ ಕಾಂಚನ್, ಪ್ರತಿಭಟನೆ ನಡೆಸುವುದು ಪ್ರತಿಪಕ್ಷದಲ್ಲಿರುವ ನಮ್ಮ ಹಕ್ಕು. ಇಂತಹ ಸಂದರ್ಭದಲ್ಲಿ ರಾಜಕೀಯ ಆರೋಪ ಮಾಡುವುದು ಸಾಮಾನ್ಯ ಎಂದು ತಿಳಿಸಿದರು. ರಘುಪತಿ ಭಟ್ ಮಾತನಾಡಿ, ನಮ್ಮ ಮೇಲೆ ಆರೋಪ ಮಾಡಿದರೆ ಅವರ ಯೋಗ್ಯತೆ ಅಳೆಯುತ್ತದೆ. ಜಿಲ್ಲೆ ಯಲ್ಲಿ ಯಾವುದೇ ಪಕ್ಷದ ಜನಪ್ರತಿನಿಧಿಗಳು ಕೂಡ ಶೇ.೪೦ ಕಮಿಷನ್ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು