5:32 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಶಾಸಕ ರಘುಪತಿ ಭಟ್ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ: ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ- ವಿರೋಧ ಪಕ್ಷದ ಸದಸ್ಯರ ಮಧ್ಯೆ ವಾಗ್ವಾದ

01/10/2022, 00:03

ಉಡುಪಿ(reporterkarnataka.com): ಮಲ್ಪೆ ರಾಷ್ಟೀಯ ಹೆದ್ದಾರಿ ದುರಸ್ತಿಗೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ ವಿರುದ್ಧದ ಶೇ.40 ಪರ್ಸೆಂಟ್ ಕಮಿಷನ್ ಆರೋಪ ವಿಚಾರ ಇಂದು ನಡೆದ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ವಿಷಯ ಪ್ರಸ್ತಾಪಿಸಿದ ಗಿರೀಶ್ ಅಂಚನ್, ವಿಪಕ್ಷ ನಾಯಕ ರಮೇಶ್ ಕಾಂಚನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಘುಪತಿ ಭಟ್ ವಿರುದ್ಧ ಶೇ.40ಪರ್ಸೆಂಟ್ ಕಮಿಷನ್ ಆರೋಪ ಮಾಡಲಾಗಿದೆ. ಇದು ಸತ್ಯ ವಿಚಾರವಲ್ಲ. ನಮ್ಮಲ್ಲಿ ಯಾರು ಕಮಿಷನ್ ಪಡೆದುಕೊಳುವುದಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ರಮೇಶ್ ಕಾಂಚನ್, ಪ್ರತಿಭಟನೆ ನಡೆಸುವುದು ಪ್ರತಿಪಕ್ಷದಲ್ಲಿರುವ ನಮ್ಮ ಹಕ್ಕು. ಇಂತಹ ಸಂದರ್ಭದಲ್ಲಿ ರಾಜಕೀಯ ಆರೋಪ ಮಾಡುವುದು ಸಾಮಾನ್ಯ ಎಂದು ತಿಳಿಸಿದರು. ರಘುಪತಿ ಭಟ್ ಮಾತನಾಡಿ, ನಮ್ಮ ಮೇಲೆ ಆರೋಪ ಮಾಡಿದರೆ ಅವರ ಯೋಗ್ಯತೆ ಅಳೆಯುತ್ತದೆ. ಜಿಲ್ಲೆ ಯಲ್ಲಿ ಯಾವುದೇ ಪಕ್ಷದ ಜನಪ್ರತಿನಿಧಿಗಳು ಕೂಡ ಶೇ.೪೦ ಕಮಿಷನ್ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು