10:34 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಶಾಸಕ ರಘುಪತಿ ಭಟ್ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ: ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ- ವಿರೋಧ ಪಕ್ಷದ ಸದಸ್ಯರ ಮಧ್ಯೆ ವಾಗ್ವಾದ

01/10/2022, 00:03

ಉಡುಪಿ(reporterkarnataka.com): ಮಲ್ಪೆ ರಾಷ್ಟೀಯ ಹೆದ್ದಾರಿ ದುರಸ್ತಿಗೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ ವಿರುದ್ಧದ ಶೇ.40 ಪರ್ಸೆಂಟ್ ಕಮಿಷನ್ ಆರೋಪ ವಿಚಾರ ಇಂದು ನಡೆದ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ವಿಷಯ ಪ್ರಸ್ತಾಪಿಸಿದ ಗಿರೀಶ್ ಅಂಚನ್, ವಿಪಕ್ಷ ನಾಯಕ ರಮೇಶ್ ಕಾಂಚನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಘುಪತಿ ಭಟ್ ವಿರುದ್ಧ ಶೇ.40ಪರ್ಸೆಂಟ್ ಕಮಿಷನ್ ಆರೋಪ ಮಾಡಲಾಗಿದೆ. ಇದು ಸತ್ಯ ವಿಚಾರವಲ್ಲ. ನಮ್ಮಲ್ಲಿ ಯಾರು ಕಮಿಷನ್ ಪಡೆದುಕೊಳುವುದಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ರಮೇಶ್ ಕಾಂಚನ್, ಪ್ರತಿಭಟನೆ ನಡೆಸುವುದು ಪ್ರತಿಪಕ್ಷದಲ್ಲಿರುವ ನಮ್ಮ ಹಕ್ಕು. ಇಂತಹ ಸಂದರ್ಭದಲ್ಲಿ ರಾಜಕೀಯ ಆರೋಪ ಮಾಡುವುದು ಸಾಮಾನ್ಯ ಎಂದು ತಿಳಿಸಿದರು. ರಘುಪತಿ ಭಟ್ ಮಾತನಾಡಿ, ನಮ್ಮ ಮೇಲೆ ಆರೋಪ ಮಾಡಿದರೆ ಅವರ ಯೋಗ್ಯತೆ ಅಳೆಯುತ್ತದೆ. ಜಿಲ್ಲೆ ಯಲ್ಲಿ ಯಾವುದೇ ಪಕ್ಷದ ಜನಪ್ರತಿನಿಧಿಗಳು ಕೂಡ ಶೇ.೪೦ ಕಮಿಷನ್ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು