2:21 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಶಾಸಕ ರಾಜು ಕಾಗೆಯಿಂದ ಕಿರುಕುಳ: ಗ್ರಾಪಂ ಮಾಜಿ ಅಧ್ಯಕ್ಷ ಆರೋಪ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಶಾಸಕರ ಮನೆ ಮುಂದೆ ಆಗಮಿಸಿದ ರಾಮಗೌಡ

06/06/2023, 13:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗೇವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಶಾಸಕರ ಮನೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೊಬ್ಬರು ಕುಟುಂಬ ಸಹಿತ ಶಾಸಕ ಮನೆ ಮುಂದೆ ಆಗಮಿಸಿದ ಘಟನೆ ನಡೆದಿದೆ.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶಿರಗುಪ್ಪಿ ಗ್ರಾ‌ಮದ ರಾಮಗೌಡ ಪಾಟೀಲ್ ಎಂಬವರು ಈ ಆರೋಪ ಮಾಡಿದ್ದಾರೆ.
ಚುನಾವಣೆ ವೇಳೆ ತಮ್ಮ ಪರ ಪ್ರಚಾರ ಮಾಡದೆ, ಬಿಜೆಪಿ ಪರ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಶಾಸಕರು ನಮ್ಮನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ರಾಮಗೌಡ ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ತಮ್ಮ ಹೆಸರಿನ ಎಮ್.ಎಸ್.ಐ.ಎಲ್ ಮಧ್ಯ ಮಳಿಗೆಗೂ ತೊಂದರೆ ನೀಡುತ್ತಿದ್ದಾರೆ.


ನಿನ್ನನ್ನ ಬದುಕಲು ಬಿಡಲ್ಲ ಎಂದು ಕಿರುಕುಳ ನೀಡುತ್ತಿದ್ದಾರೆ ಎಂದು ರಾಮಗೌಡ ಪಾಟೀಲ್ ಆರೋಪಿಸಿದ್ದಾರೆ.
ನಿನ್ನೆ ರಾತ್ರಿ ಕುಟುಂಬ ಸಮೇತ ಶಾಸಕರ ಮನೆ ಎದುರು ಬಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಾಮಗೌಡ ಹೇಳಿದ್ದರು. ಗ್ರಾಮ ಪಂಚಾಯತಿ ಮೈಕ್ ಮೂಲಕ ಗ್ರಾಮದಲ್ಲಿ ರಾಮಗೌಡ ಅವರು ಈ ಕುರಿತು ಡಂಗೂರ ಸಾರಿದ್ದರು. ಶಾಸಕರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು.
ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಂಡರೆ ಸಮಾಧಾನ ಆಗುತ್ತಾ ಎಂದು ರಾಮಗೌಡ ಶಾಸಕರಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಮಾಡಿಕೊಂಡರೆ ಸಮಾಧಾನ ಆಗುತ್ತದೆ ಎಂದು ರಾಜು ಕಾಗೆ ಹೇಳಿದ್ದರು ಎಂದು ಆರೋಪಿಸಲಾಗಿದೆ.
ಬೆಳಕಾಗುತ್ತಿದ್ದಂತೆ ರಾಮ ಗೌಡ ಅವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಸದ್ಯ ರಾಮನಗೌಡ ಪಾಟೀಲ್ ಪೊಲೀಸರು ವಶದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು