4:54 AM Tuesday11 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಶಾಸಕ ಶ್ರೀಮಂತ್ ಪಾಟೀಲ್ ಆಪ್ತರಿಂದ ಹಲ್ಲೆ, ಜೀವ ಬೆದರಿಕೆ: ಬಂದೇನವಾಜ್ ಮುಲ್ಲಾ ಆರೋಪ

14/10/2022, 10:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ ಆಪ್ತರು ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಬಂದೇನವಾಜ್ ಮುಲ್ಲಾ ಎಂಬವರ ಮೇಲೆ ಕಳೆದ 6ನೇ ತಾರೀಕು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಶಾಸಕರ ಪಿ.ಎ. ರಾಜು ಮಾನೆ ಅವರು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಹಲ್ಲೆಗೆ ಒಳಗಾಗಿರುವ ಬಂದೇನಮಾಜ ಮುಲ್ಲಾ ಹಾಗೂ ಅವರ ಸಂಬಂಧಿಕರು ಆರೋಪ ಮಾಡಿದ್ದಾರೆ.


ಬಂದೇನಮಾಜ ಮುಲ್ಲಾ ಕೆಲಸ ಮುಗಿಸಿಕೊಂಡು ಊರಿಗೆ ಬರುತ್ತಿರುವಾಗ ಕಾಗವಾಡ ಶಾಸಕ ಶ್ರಿಮಂತ ಪಾಟೀಲ ಅವರ ಆಪ್ತ, ಗ್ರಾ ಪಂ ಸದಸ್ಯ ಶಂಕರಗೌಡ ಪಾಟೀಲ್, ಸಂಗಡಿರಾದ ರಾಘವೇಂದ್ರ ಸಪ್ತಸಾಗರ್, ಗಂಗಪ್ಪ ಮಾಳಿ, ಬುಜುಗೌಡ ಪಾಟೀಲ್ ಎಂಬುವರು ಬಂದೇನಮಾಜ್ ಮುಲ್ಲಾ ಎಂಬುವರ ಮೇಲೆ ಮಧ್ಯದ ಅಮಲಿನಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ ಅಥಣಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮಾರನೆಯ ದಿನ 7ನೇ ತಾರೀಕು ನಾಲ್ವರ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತಾರೆ. ದೂರು ದಾಖಲಾಗಿದ್ದರು ಅಥಣಿ ಪೊಲೀಸರು ಆರೋಪಿಗಳ ಮೇಲೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಘಟನೆಯಾಗಿ ಒಂದು ವಾರ ಕಳೆದರೂ FIR ಪ್ರತಿ ನೀಡುತ್ತಿಲ್ಲ ಹಾಗೂ ಅಥಣಿ ಪೊಲೀಸರು ರಾಜಕೀಯ ವ್ಯಕ್ತಿಗಳ ಬೆನ್ನಿಗೆ ನಿಂತಿದ್ದಾರೆ ಎಂದು ಅಥಣಿ ಪೊಲೀಸರ ಮೇಲೆ ಆರೋಪ ಮಾಡುತ್ತಿದ್ದಾರೆ.
ಹಲ್ಲೆಗೊಳಗಾದ ವ್ಯಕ್ತಿ ಪದೇ ಪದೇ ಪೊಲೀಸ್ ಠಾಣೆಗೆ ನ್ಯಾಯ ಕೊಡಿಸುವಂತೆ ಹೋಗುತ್ತಿದ್ದಂತೆ ಶಾಸಕ ಶ್ರೀಮಂತ ಪಾಟೀಲ್ ಆಪ್ತ ಸಲಹೆಗಾರ ರಾಜು ಮಾನೆ ಎಂಬುವರು ದೂರು ವಾಪಸ್ ತೆಗೆದುಕೋ ಇಲ್ಲವಾದರೆ ನಾವು ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕುತ್ತಿದ್ದಾರೆ ಹಾಗೂ ಗುಂಡಾ ವರ್ತನೆ ತೋರುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ.

ಕ್ಷೇತ್ರದಲ್ಲಿ ಶ್ರೀಮಂತ ಪಾಟೀಲ್ ಅಭಿವೃದ್ಧಿ ಕಾರ್ಯಗಳಲ್ಲಿ ನಿರತರಾದರೆ, ಕೆಲವರು ಶಾಸಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಗ್ರಾಮದಲ್ಲಿ ಮೆರೆಯುತ್ತಿದ್ದಾರೆ ಶಾಸಕರು ಇಂಥವರಿಗೆ ಕಡಿವಾಣ ಹಾಕುವಂತೆ ಪ್ರಜ್ಞಾವಂತರು ಆಗ್ರಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು