11:18 AM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಶಾಸಕ ಶ್ರೀಮಂತ್ ಪಾಟೀಲ್ ಆಪ್ತರಿಂದ ಹಲ್ಲೆ, ಜೀವ ಬೆದರಿಕೆ: ಬಂದೇನವಾಜ್ ಮುಲ್ಲಾ ಆರೋಪ

14/10/2022, 10:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ ಆಪ್ತರು ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಬಂದೇನವಾಜ್ ಮುಲ್ಲಾ ಎಂಬವರ ಮೇಲೆ ಕಳೆದ 6ನೇ ತಾರೀಕು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಶಾಸಕರ ಪಿ.ಎ. ರಾಜು ಮಾನೆ ಅವರು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಹಲ್ಲೆಗೆ ಒಳಗಾಗಿರುವ ಬಂದೇನಮಾಜ ಮುಲ್ಲಾ ಹಾಗೂ ಅವರ ಸಂಬಂಧಿಕರು ಆರೋಪ ಮಾಡಿದ್ದಾರೆ.


ಬಂದೇನಮಾಜ ಮುಲ್ಲಾ ಕೆಲಸ ಮುಗಿಸಿಕೊಂಡು ಊರಿಗೆ ಬರುತ್ತಿರುವಾಗ ಕಾಗವಾಡ ಶಾಸಕ ಶ್ರಿಮಂತ ಪಾಟೀಲ ಅವರ ಆಪ್ತ, ಗ್ರಾ ಪಂ ಸದಸ್ಯ ಶಂಕರಗೌಡ ಪಾಟೀಲ್, ಸಂಗಡಿರಾದ ರಾಘವೇಂದ್ರ ಸಪ್ತಸಾಗರ್, ಗಂಗಪ್ಪ ಮಾಳಿ, ಬುಜುಗೌಡ ಪಾಟೀಲ್ ಎಂಬುವರು ಬಂದೇನಮಾಜ್ ಮುಲ್ಲಾ ಎಂಬುವರ ಮೇಲೆ ಮಧ್ಯದ ಅಮಲಿನಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ ಅಥಣಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮಾರನೆಯ ದಿನ 7ನೇ ತಾರೀಕು ನಾಲ್ವರ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತಾರೆ. ದೂರು ದಾಖಲಾಗಿದ್ದರು ಅಥಣಿ ಪೊಲೀಸರು ಆರೋಪಿಗಳ ಮೇಲೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಘಟನೆಯಾಗಿ ಒಂದು ವಾರ ಕಳೆದರೂ FIR ಪ್ರತಿ ನೀಡುತ್ತಿಲ್ಲ ಹಾಗೂ ಅಥಣಿ ಪೊಲೀಸರು ರಾಜಕೀಯ ವ್ಯಕ್ತಿಗಳ ಬೆನ್ನಿಗೆ ನಿಂತಿದ್ದಾರೆ ಎಂದು ಅಥಣಿ ಪೊಲೀಸರ ಮೇಲೆ ಆರೋಪ ಮಾಡುತ್ತಿದ್ದಾರೆ.
ಹಲ್ಲೆಗೊಳಗಾದ ವ್ಯಕ್ತಿ ಪದೇ ಪದೇ ಪೊಲೀಸ್ ಠಾಣೆಗೆ ನ್ಯಾಯ ಕೊಡಿಸುವಂತೆ ಹೋಗುತ್ತಿದ್ದಂತೆ ಶಾಸಕ ಶ್ರೀಮಂತ ಪಾಟೀಲ್ ಆಪ್ತ ಸಲಹೆಗಾರ ರಾಜು ಮಾನೆ ಎಂಬುವರು ದೂರು ವಾಪಸ್ ತೆಗೆದುಕೋ ಇಲ್ಲವಾದರೆ ನಾವು ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕುತ್ತಿದ್ದಾರೆ ಹಾಗೂ ಗುಂಡಾ ವರ್ತನೆ ತೋರುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ.

ಕ್ಷೇತ್ರದಲ್ಲಿ ಶ್ರೀಮಂತ ಪಾಟೀಲ್ ಅಭಿವೃದ್ಧಿ ಕಾರ್ಯಗಳಲ್ಲಿ ನಿರತರಾದರೆ, ಕೆಲವರು ಶಾಸಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಗ್ರಾಮದಲ್ಲಿ ಮೆರೆಯುತ್ತಿದ್ದಾರೆ ಶಾಸಕರು ಇಂಥವರಿಗೆ ಕಡಿವಾಣ ಹಾಕುವಂತೆ ಪ್ರಜ್ಞಾವಂತರು ಆಗ್ರಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು