1:36 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶಾಸಕ ಶ್ರೀಮಂತ್ ಪಾಟೀಲ್ ಆಪ್ತರಿಂದ ಹಲ್ಲೆ, ಜೀವ ಬೆದರಿಕೆ: ಬಂದೇನವಾಜ್ ಮುಲ್ಲಾ ಆರೋಪ

14/10/2022, 10:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ ಆಪ್ತರು ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಬಂದೇನವಾಜ್ ಮುಲ್ಲಾ ಎಂಬವರ ಮೇಲೆ ಕಳೆದ 6ನೇ ತಾರೀಕು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಶಾಸಕರ ಪಿ.ಎ. ರಾಜು ಮಾನೆ ಅವರು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಹಲ್ಲೆಗೆ ಒಳಗಾಗಿರುವ ಬಂದೇನಮಾಜ ಮುಲ್ಲಾ ಹಾಗೂ ಅವರ ಸಂಬಂಧಿಕರು ಆರೋಪ ಮಾಡಿದ್ದಾರೆ.


ಬಂದೇನಮಾಜ ಮುಲ್ಲಾ ಕೆಲಸ ಮುಗಿಸಿಕೊಂಡು ಊರಿಗೆ ಬರುತ್ತಿರುವಾಗ ಕಾಗವಾಡ ಶಾಸಕ ಶ್ರಿಮಂತ ಪಾಟೀಲ ಅವರ ಆಪ್ತ, ಗ್ರಾ ಪಂ ಸದಸ್ಯ ಶಂಕರಗೌಡ ಪಾಟೀಲ್, ಸಂಗಡಿರಾದ ರಾಘವೇಂದ್ರ ಸಪ್ತಸಾಗರ್, ಗಂಗಪ್ಪ ಮಾಳಿ, ಬುಜುಗೌಡ ಪಾಟೀಲ್ ಎಂಬುವರು ಬಂದೇನಮಾಜ್ ಮುಲ್ಲಾ ಎಂಬುವರ ಮೇಲೆ ಮಧ್ಯದ ಅಮಲಿನಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ ಅಥಣಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮಾರನೆಯ ದಿನ 7ನೇ ತಾರೀಕು ನಾಲ್ವರ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತಾರೆ. ದೂರು ದಾಖಲಾಗಿದ್ದರು ಅಥಣಿ ಪೊಲೀಸರು ಆರೋಪಿಗಳ ಮೇಲೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಘಟನೆಯಾಗಿ ಒಂದು ವಾರ ಕಳೆದರೂ FIR ಪ್ರತಿ ನೀಡುತ್ತಿಲ್ಲ ಹಾಗೂ ಅಥಣಿ ಪೊಲೀಸರು ರಾಜಕೀಯ ವ್ಯಕ್ತಿಗಳ ಬೆನ್ನಿಗೆ ನಿಂತಿದ್ದಾರೆ ಎಂದು ಅಥಣಿ ಪೊಲೀಸರ ಮೇಲೆ ಆರೋಪ ಮಾಡುತ್ತಿದ್ದಾರೆ.
ಹಲ್ಲೆಗೊಳಗಾದ ವ್ಯಕ್ತಿ ಪದೇ ಪದೇ ಪೊಲೀಸ್ ಠಾಣೆಗೆ ನ್ಯಾಯ ಕೊಡಿಸುವಂತೆ ಹೋಗುತ್ತಿದ್ದಂತೆ ಶಾಸಕ ಶ್ರೀಮಂತ ಪಾಟೀಲ್ ಆಪ್ತ ಸಲಹೆಗಾರ ರಾಜು ಮಾನೆ ಎಂಬುವರು ದೂರು ವಾಪಸ್ ತೆಗೆದುಕೋ ಇಲ್ಲವಾದರೆ ನಾವು ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕುತ್ತಿದ್ದಾರೆ ಹಾಗೂ ಗುಂಡಾ ವರ್ತನೆ ತೋರುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ.

ಕ್ಷೇತ್ರದಲ್ಲಿ ಶ್ರೀಮಂತ ಪಾಟೀಲ್ ಅಭಿವೃದ್ಧಿ ಕಾರ್ಯಗಳಲ್ಲಿ ನಿರತರಾದರೆ, ಕೆಲವರು ಶಾಸಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಗ್ರಾಮದಲ್ಲಿ ಮೆರೆಯುತ್ತಿದ್ದಾರೆ ಶಾಸಕರು ಇಂಥವರಿಗೆ ಕಡಿವಾಣ ಹಾಕುವಂತೆ ಪ್ರಜ್ಞಾವಂತರು ಆಗ್ರಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು