5:32 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಶಾಸಕರ ಕಳ್ಳರಿದ್ದಾರೆ, ಕಾಂಗ್ರೆಸ್ 150 ಸ್ಥಾನ‌ ಗೆಲ್ಲುವುದು ಅಗತ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

25/04/2023, 15:04

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು 150 ಸ್ಥಾನಗಳಲ್ಲಿ ಗೆಲ್ಲುವುದು ಬಹಳ ಮುಖ್ಯ. ಒಂದೆರಡು ಶಾಸಕರ ಕಳ್ಳತನ ಮಾಡಿದ್ರೂ ಸುಭದ್ರ ಸರ್ಕಾರ ಉಳಿಸಲು ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕರ್ನಾಟಕ, ಗುಜರಾತ್, ಗೋವಾ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಕಳವು ಮಾಡಲಾಗಿದೆ. ಇಡಿ, ಐಟಿ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಕಳವು ಮಾಡುವ ಕೆಲಸ ನಡೆಯುತ್ತಿದೆ.
ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಜನ ಆತಂಕದಲ್ಲಿರುವ ಸಂದರ್ಭದಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಮಹತ್ವದ್ದು. ರಾಜ್ಯದಲ್ಲಿ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಶೇ 40 ಕಮಿಷನ್ ಪಡೆಯುವ ಮೂಲಕ ಜನರಿಗೆ ಅನ್ಯಾಯ ಮಾಡಿದ್ದು, ಆಡಳಿತ ಯಂತ್ರ ಸಂಪೂರ್ಣ ವಿಫಲವಾಗಿದೆ ಎಂದರು.
ಬಿಜೆಪಿ ಎಲ್ಲಾ ಕಡೆ ಎಟಿಎಂ ಮಷಿನ್ ಇಟ್ಟಿದ್ದಾರೆ. ದುಡ್ಡಿನ ಮೇಲೆ ಬಿಜೆಪಿ ಚುನಾವಣೆ ನಡೆಸುತ್ತಿದೆ. ಮನಿ ಮತ್ತು ಮಸಲ್ ಪವರ್ ಬಳಕೆ ಮಾಡುತ್ತಿದ್ದಾರೆ. ದೇಶದಲ್ಲಿ ಶಿಕ್ಷಣ, ನಿರುದ್ಯೋಗ, ಹೂಡಿಕೆ, ಹಣದುಬ್ಬರ, ಭ್ರಷ್ಟಾಚಾರದ ಬಗ್ಗೆ ದೇಶದ ಪ್ರಧಾನಿ ಅವರು ಮಾತನಾಡುತ್ತಿಲ್ಲ. ಬೆಂಗಳೂರಿನಿಂದ ವಾರಣಾಸಿಗೆ ಮೊನ್ನೆ ಒಂದು ರೈಲು ಬಿಟ್ಟು ಅದನ್ನು ದೊಡ್ಡ ಸುದ್ದಿ ಮಾಡಿದ್ದಾರೆ. ನಾನು ರೈಲ್ವೆ ಸಚಿವ ಆಗಿದ್ದಾಗ 30 ಕ್ಕೂ ಅಧಿಕ ರೈಲು ಹಾಕಿದ್ದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷವು185 ವಿಧಾನಸಭಾ ಕ್ಷೇತ್ರಗಳಿಗೆ ಬೇರೆ ಪಕ್ಷಗಳಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿತ್ತು. ಕೆಲ ಕಡೆಗಳಲ್ಲಿ ನಾಯಕರ, ಆಕಾಂಕ್ಷಿಗಳ ಬೇಡಿಕೆ ಹೆಚ್ಚಾಗಿದ್ದರಿಂದ ಪಟ್ಟಿ ಬಿಡುಗಡೆ ವಿಳಂಬ ಆಯಿತು ಎಂದರು.


ಪಕ್ಷದ ಟಿಕೆಟ್ ಸಿಗದೇ ಇದ್ದವರೂ ಹತಾಶೆಯಿಂದ ಬೇರೆ ಬೇರೆ ರೀತಿಯಲ್ಲಿ ಆರೋಪ ಮಾಡ್ತಾರೆ ಅದಕ್ಕೆಲ್ಲಾ ಈಗ ಸಮಾಜಿಯಿಸಿ ಕೊಡಲ್ಲ. ನಮ್ಮ ಗುರಿ ಚುನಾವಣೆ ಆಗಿದೆ. ಮೊದಲ ಆದ್ಯತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡುವುದಾಗಿದೆ. ಎಲ್ಲರೂ ಒಗ್ಗಟ್ಟಾಗಿ ಈ ಚುನಾವಣೆ ಎದುರಿಸುತ್ತೇವೆ ಎಂದರು.
ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಹರೀಶ್ ಕುಮಾರ್, ಶಾಸಕರಾದ ಯು.ಟಿ.ಖಾದರ್, ಮಂಜುನಾಥ ಭಂಡಾರಿ, ಮಾಜಿ ಸಚಿವ ಬಿ.ರಮಾನಾಥ ರೈ, ಎಐಸಿಸಿ ವಕ್ತಾರ ಡಾ.ಶಮಾ ಮುಹಮ್ಮದ್, ಪ್ರಣವ್ ಜ್ಹಾ, ಶಾಸಕ, ಚರಣ್ ಸಿಂಗ್ ಸಪ್ರಾ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಐವನ್ ಡಿಸೋಜ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು