7:25 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಶಾಸಕದ್ವಯರ ರಾಜಕೀಯ ಒತ್ತಡದಿಂದ ಎಎಸ್ಪಿ ವರ್ಗಾವಣೆ: ಮಾಜಿ ಸಚಿವ ರಮಾನಾಥ  ರೈ ಆರೋಪ

07/07/2022, 16:45

ಬಂಟ್ವಾಳ(reporterkarnataka.com):  ಬಂಟ್ವಾಳ ಹಾಗೂ ಬೆಳ್ತಂಗಡಿ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದ್ದಾರೆ.

ಬಿ.ಸಿ.ರೋಡ್‌ನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಇದೊಂದು ರಾಜಕೀಯ ಪ್ರೇರಿತ ವರ್ಗಾವಣೆ, ಒಳ್ಳೆಯ ಕೆಲಸ ಮಾಡುತ್ತಿದ್ದ ಅಧಿಕಾರಿಯನ್ನು ಹಠಾತ್ತಾಗಿ ವರ್ಗಾವಣೆ ಮಾಡಿದ್ದಾರೆ, ನಿರಂತರವಾಗಿ ಅಕ್ರಮ ಮರಳುಗಾರಿಕೆ ಕ್ಷೇತ್ರದಲ್ಲಿ ನಡೆಯುತ್ತಿದ್ದು,

ಅನಂತಾಡಿಯಲ್ಲಿ ಗಣಿಗಾರಿಕೆಯಿಂದ ಗುಹಾತೀರ್ಥಕ್ಕೆ ತೊಂದರೆ ಆಗುತ್ತಿದೆ ಎಂಬ ಆರೋಪವನ್ನು ಮಾಡಿ ಪ್ರತಿಭಟನೆಯನ್ನು ಮಾಡಿದ್ದೆವು ಎಂದು ನೆನಪಿಸಿದ ಅವರು ಬಿಜೆಪಿಯವರು ಬೇರೆಯವರಿಗೆ ಬುದ್ಧಿವಾದ ಹೇಳುತ್ತಾರೆ. ಆದರೆ ಅವರಿಗೆ ಬುದ್ಧಿ ಹೇಳಬೇಕಾದವರು ಜನರು ಎಂದರು.

ಒಂದು ಲೋಡ್ ಮರಳಿಗೆ 15 ಸಾವಿರ ರೂ. ಕೊಡಬೇಕಾದ ಪರಿಸ್ಥಿತಿ ಇದೆ, ಮನೆ ಕಟ್ಟುವವರು ಸಂಕಷ್ಟ ಪಡುತ್ತಿದ್ದಾರೆ. ತಾಲೂಕಿನ ಒಂದು ಕಡೆ ಪರವಾನಗಿ ತೆಗೆದುಕೊಂಡವರು ಎಲ್ಲ ಕಡೆಗಳಲ್ಲೂ ಮರಳುಗಾರಿಕೆ ಮಾಡುತ್ತಾರೆ ಎಂದು ರೈ ಆರೋಪಿಸಿದರು.

ಜೂಜು ಅಡ್ಡೆಯ ಬಳಿಯೇ ಕೊಲೆ ಯತ್ನ ಪ್ರಕರಣ, ಹಲ್ಲೆಗಳು ನಡೆದದ್ದು ವರದಿಯಾಗಿವೆ. ಹೆಣ್ಣುಮಕ್ಕಳ ಕರಿಮಣಿ ಅಡವಿಟ್ಟು ಜುಗಾರಿ ದಂಧೆಯಲ್ಲಿ ತೊಡಗಿಸಿಕೊಂಡವರಿದ್ದಾರೆ. ಮರಳುಗಾರಿಕೆಯ ಪಕ್ಕದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ,ಈ ಭಾಗದ ಬೆಳ್ತಂಗಡಿ ಮತ್ತು ಬಂಟ್ವಾಳದ ಇಬ್ಬರೂ ಶಾಸಕರ ಬೆಂಬಲ ಇದೆ ಎಂದು ನಾನು ನೇರವಾಗಿ ಆರೋಪಿಸುತ್ತೇನೆ ಎಂದು ರೈ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು