10:03 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಶಾಸಕದ್ವಯರ ರಾಜಕೀಯ ಒತ್ತಡದಿಂದ ಎಎಸ್ಪಿ ವರ್ಗಾವಣೆ: ಮಾಜಿ ಸಚಿವ ರಮಾನಾಥ  ರೈ ಆರೋಪ

07/07/2022, 16:45

ಬಂಟ್ವಾಳ(reporterkarnataka.com):  ಬಂಟ್ವಾಳ ಹಾಗೂ ಬೆಳ್ತಂಗಡಿ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದ್ದಾರೆ.

ಬಿ.ಸಿ.ರೋಡ್‌ನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಇದೊಂದು ರಾಜಕೀಯ ಪ್ರೇರಿತ ವರ್ಗಾವಣೆ, ಒಳ್ಳೆಯ ಕೆಲಸ ಮಾಡುತ್ತಿದ್ದ ಅಧಿಕಾರಿಯನ್ನು ಹಠಾತ್ತಾಗಿ ವರ್ಗಾವಣೆ ಮಾಡಿದ್ದಾರೆ, ನಿರಂತರವಾಗಿ ಅಕ್ರಮ ಮರಳುಗಾರಿಕೆ ಕ್ಷೇತ್ರದಲ್ಲಿ ನಡೆಯುತ್ತಿದ್ದು,

ಅನಂತಾಡಿಯಲ್ಲಿ ಗಣಿಗಾರಿಕೆಯಿಂದ ಗುಹಾತೀರ್ಥಕ್ಕೆ ತೊಂದರೆ ಆಗುತ್ತಿದೆ ಎಂಬ ಆರೋಪವನ್ನು ಮಾಡಿ ಪ್ರತಿಭಟನೆಯನ್ನು ಮಾಡಿದ್ದೆವು ಎಂದು ನೆನಪಿಸಿದ ಅವರು ಬಿಜೆಪಿಯವರು ಬೇರೆಯವರಿಗೆ ಬುದ್ಧಿವಾದ ಹೇಳುತ್ತಾರೆ. ಆದರೆ ಅವರಿಗೆ ಬುದ್ಧಿ ಹೇಳಬೇಕಾದವರು ಜನರು ಎಂದರು.

ಒಂದು ಲೋಡ್ ಮರಳಿಗೆ 15 ಸಾವಿರ ರೂ. ಕೊಡಬೇಕಾದ ಪರಿಸ್ಥಿತಿ ಇದೆ, ಮನೆ ಕಟ್ಟುವವರು ಸಂಕಷ್ಟ ಪಡುತ್ತಿದ್ದಾರೆ. ತಾಲೂಕಿನ ಒಂದು ಕಡೆ ಪರವಾನಗಿ ತೆಗೆದುಕೊಂಡವರು ಎಲ್ಲ ಕಡೆಗಳಲ್ಲೂ ಮರಳುಗಾರಿಕೆ ಮಾಡುತ್ತಾರೆ ಎಂದು ರೈ ಆರೋಪಿಸಿದರು.

ಜೂಜು ಅಡ್ಡೆಯ ಬಳಿಯೇ ಕೊಲೆ ಯತ್ನ ಪ್ರಕರಣ, ಹಲ್ಲೆಗಳು ನಡೆದದ್ದು ವರದಿಯಾಗಿವೆ. ಹೆಣ್ಣುಮಕ್ಕಳ ಕರಿಮಣಿ ಅಡವಿಟ್ಟು ಜುಗಾರಿ ದಂಧೆಯಲ್ಲಿ ತೊಡಗಿಸಿಕೊಂಡವರಿದ್ದಾರೆ. ಮರಳುಗಾರಿಕೆಯ ಪಕ್ಕದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ,ಈ ಭಾಗದ ಬೆಳ್ತಂಗಡಿ ಮತ್ತು ಬಂಟ್ವಾಳದ ಇಬ್ಬರೂ ಶಾಸಕರ ಬೆಂಬಲ ಇದೆ ಎಂದು ನಾನು ನೇರವಾಗಿ ಆರೋಪಿಸುತ್ತೇನೆ ಎಂದು ರೈ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು