10:11 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಶಾಸಕದ್ವಯರ ರಾಜಕೀಯ ಒತ್ತಡದಿಂದ ಎಎಸ್ಪಿ ವರ್ಗಾವಣೆ: ಮಾಜಿ ಸಚಿವ ರಮಾನಾಥ  ರೈ ಆರೋಪ

07/07/2022, 16:45

ಬಂಟ್ವಾಳ(reporterkarnataka.com):  ಬಂಟ್ವಾಳ ಹಾಗೂ ಬೆಳ್ತಂಗಡಿ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದ್ದಾರೆ.

ಬಿ.ಸಿ.ರೋಡ್‌ನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಇದೊಂದು ರಾಜಕೀಯ ಪ್ರೇರಿತ ವರ್ಗಾವಣೆ, ಒಳ್ಳೆಯ ಕೆಲಸ ಮಾಡುತ್ತಿದ್ದ ಅಧಿಕಾರಿಯನ್ನು ಹಠಾತ್ತಾಗಿ ವರ್ಗಾವಣೆ ಮಾಡಿದ್ದಾರೆ, ನಿರಂತರವಾಗಿ ಅಕ್ರಮ ಮರಳುಗಾರಿಕೆ ಕ್ಷೇತ್ರದಲ್ಲಿ ನಡೆಯುತ್ತಿದ್ದು,

ಅನಂತಾಡಿಯಲ್ಲಿ ಗಣಿಗಾರಿಕೆಯಿಂದ ಗುಹಾತೀರ್ಥಕ್ಕೆ ತೊಂದರೆ ಆಗುತ್ತಿದೆ ಎಂಬ ಆರೋಪವನ್ನು ಮಾಡಿ ಪ್ರತಿಭಟನೆಯನ್ನು ಮಾಡಿದ್ದೆವು ಎಂದು ನೆನಪಿಸಿದ ಅವರು ಬಿಜೆಪಿಯವರು ಬೇರೆಯವರಿಗೆ ಬುದ್ಧಿವಾದ ಹೇಳುತ್ತಾರೆ. ಆದರೆ ಅವರಿಗೆ ಬುದ್ಧಿ ಹೇಳಬೇಕಾದವರು ಜನರು ಎಂದರು.

ಒಂದು ಲೋಡ್ ಮರಳಿಗೆ 15 ಸಾವಿರ ರೂ. ಕೊಡಬೇಕಾದ ಪರಿಸ್ಥಿತಿ ಇದೆ, ಮನೆ ಕಟ್ಟುವವರು ಸಂಕಷ್ಟ ಪಡುತ್ತಿದ್ದಾರೆ. ತಾಲೂಕಿನ ಒಂದು ಕಡೆ ಪರವಾನಗಿ ತೆಗೆದುಕೊಂಡವರು ಎಲ್ಲ ಕಡೆಗಳಲ್ಲೂ ಮರಳುಗಾರಿಕೆ ಮಾಡುತ್ತಾರೆ ಎಂದು ರೈ ಆರೋಪಿಸಿದರು.

ಜೂಜು ಅಡ್ಡೆಯ ಬಳಿಯೇ ಕೊಲೆ ಯತ್ನ ಪ್ರಕರಣ, ಹಲ್ಲೆಗಳು ನಡೆದದ್ದು ವರದಿಯಾಗಿವೆ. ಹೆಣ್ಣುಮಕ್ಕಳ ಕರಿಮಣಿ ಅಡವಿಟ್ಟು ಜುಗಾರಿ ದಂಧೆಯಲ್ಲಿ ತೊಡಗಿಸಿಕೊಂಡವರಿದ್ದಾರೆ. ಮರಳುಗಾರಿಕೆಯ ಪಕ್ಕದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ,ಈ ಭಾಗದ ಬೆಳ್ತಂಗಡಿ ಮತ್ತು ಬಂಟ್ವಾಳದ ಇಬ್ಬರೂ ಶಾಸಕರ ಬೆಂಬಲ ಇದೆ ಎಂದು ನಾನು ನೇರವಾಗಿ ಆರೋಪಿಸುತ್ತೇನೆ ಎಂದು ರೈ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು