9:12 AM Sunday13 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ಲೋಕಾರ್ಪಣೆ

25/05/2022, 21:55

ಮಂಗಳೂರು(reporterkarnataka.com) :  ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ
ಸಂತ ಅಲೋಶಿಯಸ್ ಕಾಲೇಜು ಕನ್ನಡ ವಿಭಾಗ ಹಾಗೂ ಮಂಗಳೂರಿನ ಆಕೃತಿ ಹಾಗೂ ಆಶಯ ಪಬ್ಲಿಕೇಷನ್ಸ್ ಸಹಕಾರದೊಂದಿಗೆ ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ನಗರದ ಸಂತ ಅಲೋಶಿಯಸ್ ಕಾಲೇಜಿನ ಎಲ್. ಎಫ್. ರಸ್ಕಿನ ಸಭಾಂಗಣದಲ್ಲಿ ಬುಧವಾರ ಲೋಕಾರ್ಪಣೆಗೊಂಡಿತು.

ಶಶಿರಾಜ್ ರಾವ್ ಕಾವೂರು ಅವರು ವೃತ್ತಿಯಲ್ಲಿ ನ್ಯಾಯವಾದಿಯಾಗಿ ಆಸಕ್ತಿಯಲ್ಲಿ ನಾಟಕಕಾರರಾಗಿ, ಪುಸ್ತಕ ಬರಹಗಾರರಾಗಿ ಪರಿಚಿತರು. ನಾಟಕಕಾರರಾಗಿ, ನಾಟಕ ಬರಹಗಾರರಾಗಿ, ನಿರ್ದೇಶಕರಾಗಿ ಅಲ್ಲೂ ಸೈ ಎನಿಸಿಕೊಂಡವರು. ಹಲವು ನಾಟಕಗಳಿಗೆ ಗೀತ ರಚನೆಕಾರರಾಗಿ ದುಡಿದ ಅನುಭವ ಶಶಿರಾಜ್ ಕಾವೂರು ಅವರಿಗಿದೆ.

ಕೃತಿ ಲೋಕಾರ್ಪಣೆ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಂತ ಅಲೋಶಿಯಸ್ ಕಾಲೇಜಿನ ಕುಲಸಚಿವ ಡಾ. ಆಲ್ವಿನ್ ಡೇಸಾ ವಹಿಸಿದ್ದರು. ತುಳು -ಕನ್ನಡ ವಿದ್ವಾಂಸ ಡಾ. ಬಿ. ಎ. ವಿವೇಕ ರೈ 
ಅವರು “ಪುದ್ದು ಕೊಡ್ತರ್ “ಕೃತಿ ಲೋಕಾರ್ಪಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾ. ದಾಮೋದರ ಶೆಟ್ಟಿ, ಉದ್ಯಮಿಗಳು ಹಾಗೂ ಚಲನಚಿತ್ರ ನಿರ್ಮಾಪಕ ದೇವದಾಸ್ ಪಾಂಡೇಶ್ವರ್, ಕರ್ನಾಟಕ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್,  ಕೊರಗ ಅಭಿವೃದ್ಧಿ ಸಂಘ ಮಾಜಿ ಜಿಲ್ಲಾಧ್ಯಕ್ಷ ರಮೇಶ್ ಮಂಚಕಲ್ ಆಗಮಿಸಿದ್ದರು. 


ಕಾರ್ಯಕ್ರಮವನ್ನು ಡಾ. ಮಹಾಲಿಂಗ ಭಟ್ (ಮುಖ್ಯಸ್ಥರು ಕನ್ನಡ ವಿಭಾಗ, ಸಂತ ಅಲೋಶಿಯಸ್ ಕಾಲೇಜು) ಪ್ರೊ. ಕೃಷ್ಣಮೂರ್ತಿ. (ಅಧ್ಯಕ್ಷರು ವಿಕಾಸ, ಸಂತ ಅಲೋಶಿಯಸ್ ಕಾಲೇಜು ಮಂಗಳೂರು), ಗೋಪಾಲಕೃಷ್ಣ ಶೆಟ್ಟಿ (ಅಧ್ಯಕ್ಷರು ರಂಗ ಸಂಗಾತಿ ಮಂಗಳೂರು) ಅವರು ನಡೆಸಿಕೊಟ್ಟರು.  ಕಾರ್ಯಕ್ರಮದಲ್ಲಿ ಕೊರಲ್ ಕಲಾ ತಂಡದಿಂದ ಡೋಲು ಪ್ರಾಕ್ಷಿಕತೆ ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು