6:53 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ಲೋಕಾರ್ಪಣೆ

25/05/2022, 21:55

ಮಂಗಳೂರು(reporterkarnataka.com) :  ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ
ಸಂತ ಅಲೋಶಿಯಸ್ ಕಾಲೇಜು ಕನ್ನಡ ವಿಭಾಗ ಹಾಗೂ ಮಂಗಳೂರಿನ ಆಕೃತಿ ಹಾಗೂ ಆಶಯ ಪಬ್ಲಿಕೇಷನ್ಸ್ ಸಹಕಾರದೊಂದಿಗೆ ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ನಗರದ ಸಂತ ಅಲೋಶಿಯಸ್ ಕಾಲೇಜಿನ ಎಲ್. ಎಫ್. ರಸ್ಕಿನ ಸಭಾಂಗಣದಲ್ಲಿ ಬುಧವಾರ ಲೋಕಾರ್ಪಣೆಗೊಂಡಿತು.

ಶಶಿರಾಜ್ ರಾವ್ ಕಾವೂರು ಅವರು ವೃತ್ತಿಯಲ್ಲಿ ನ್ಯಾಯವಾದಿಯಾಗಿ ಆಸಕ್ತಿಯಲ್ಲಿ ನಾಟಕಕಾರರಾಗಿ, ಪುಸ್ತಕ ಬರಹಗಾರರಾಗಿ ಪರಿಚಿತರು. ನಾಟಕಕಾರರಾಗಿ, ನಾಟಕ ಬರಹಗಾರರಾಗಿ, ನಿರ್ದೇಶಕರಾಗಿ ಅಲ್ಲೂ ಸೈ ಎನಿಸಿಕೊಂಡವರು. ಹಲವು ನಾಟಕಗಳಿಗೆ ಗೀತ ರಚನೆಕಾರರಾಗಿ ದುಡಿದ ಅನುಭವ ಶಶಿರಾಜ್ ಕಾವೂರು ಅವರಿಗಿದೆ.

ಕೃತಿ ಲೋಕಾರ್ಪಣೆ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಂತ ಅಲೋಶಿಯಸ್ ಕಾಲೇಜಿನ ಕುಲಸಚಿವ ಡಾ. ಆಲ್ವಿನ್ ಡೇಸಾ ವಹಿಸಿದ್ದರು. ತುಳು -ಕನ್ನಡ ವಿದ್ವಾಂಸ ಡಾ. ಬಿ. ಎ. ವಿವೇಕ ರೈ 
ಅವರು “ಪುದ್ದು ಕೊಡ್ತರ್ “ಕೃತಿ ಲೋಕಾರ್ಪಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾ. ದಾಮೋದರ ಶೆಟ್ಟಿ, ಉದ್ಯಮಿಗಳು ಹಾಗೂ ಚಲನಚಿತ್ರ ನಿರ್ಮಾಪಕ ದೇವದಾಸ್ ಪಾಂಡೇಶ್ವರ್, ಕರ್ನಾಟಕ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್,  ಕೊರಗ ಅಭಿವೃದ್ಧಿ ಸಂಘ ಮಾಜಿ ಜಿಲ್ಲಾಧ್ಯಕ್ಷ ರಮೇಶ್ ಮಂಚಕಲ್ ಆಗಮಿಸಿದ್ದರು. 


ಕಾರ್ಯಕ್ರಮವನ್ನು ಡಾ. ಮಹಾಲಿಂಗ ಭಟ್ (ಮುಖ್ಯಸ್ಥರು ಕನ್ನಡ ವಿಭಾಗ, ಸಂತ ಅಲೋಶಿಯಸ್ ಕಾಲೇಜು) ಪ್ರೊ. ಕೃಷ್ಣಮೂರ್ತಿ. (ಅಧ್ಯಕ್ಷರು ವಿಕಾಸ, ಸಂತ ಅಲೋಶಿಯಸ್ ಕಾಲೇಜು ಮಂಗಳೂರು), ಗೋಪಾಲಕೃಷ್ಣ ಶೆಟ್ಟಿ (ಅಧ್ಯಕ್ಷರು ರಂಗ ಸಂಗಾತಿ ಮಂಗಳೂರು) ಅವರು ನಡೆಸಿಕೊಟ್ಟರು.  ಕಾರ್ಯಕ್ರಮದಲ್ಲಿ ಕೊರಲ್ ಕಲಾ ತಂಡದಿಂದ ಡೋಲು ಪ್ರಾಕ್ಷಿಕತೆ ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು