8:54 AM Wednesday15 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ಲೋಕಾರ್ಪಣೆ

25/05/2022, 21:55

ಮಂಗಳೂರು(reporterkarnataka.com) :  ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ
ಸಂತ ಅಲೋಶಿಯಸ್ ಕಾಲೇಜು ಕನ್ನಡ ವಿಭಾಗ ಹಾಗೂ ಮಂಗಳೂರಿನ ಆಕೃತಿ ಹಾಗೂ ಆಶಯ ಪಬ್ಲಿಕೇಷನ್ಸ್ ಸಹಕಾರದೊಂದಿಗೆ ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ನಗರದ ಸಂತ ಅಲೋಶಿಯಸ್ ಕಾಲೇಜಿನ ಎಲ್. ಎಫ್. ರಸ್ಕಿನ ಸಭಾಂಗಣದಲ್ಲಿ ಬುಧವಾರ ಲೋಕಾರ್ಪಣೆಗೊಂಡಿತು.

ಶಶಿರಾಜ್ ರಾವ್ ಕಾವೂರು ಅವರು ವೃತ್ತಿಯಲ್ಲಿ ನ್ಯಾಯವಾದಿಯಾಗಿ ಆಸಕ್ತಿಯಲ್ಲಿ ನಾಟಕಕಾರರಾಗಿ, ಪುಸ್ತಕ ಬರಹಗಾರರಾಗಿ ಪರಿಚಿತರು. ನಾಟಕಕಾರರಾಗಿ, ನಾಟಕ ಬರಹಗಾರರಾಗಿ, ನಿರ್ದೇಶಕರಾಗಿ ಅಲ್ಲೂ ಸೈ ಎನಿಸಿಕೊಂಡವರು. ಹಲವು ನಾಟಕಗಳಿಗೆ ಗೀತ ರಚನೆಕಾರರಾಗಿ ದುಡಿದ ಅನುಭವ ಶಶಿರಾಜ್ ಕಾವೂರು ಅವರಿಗಿದೆ.

ಕೃತಿ ಲೋಕಾರ್ಪಣೆ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಂತ ಅಲೋಶಿಯಸ್ ಕಾಲೇಜಿನ ಕುಲಸಚಿವ ಡಾ. ಆಲ್ವಿನ್ ಡೇಸಾ ವಹಿಸಿದ್ದರು. ತುಳು -ಕನ್ನಡ ವಿದ್ವಾಂಸ ಡಾ. ಬಿ. ಎ. ವಿವೇಕ ರೈ 
ಅವರು “ಪುದ್ದು ಕೊಡ್ತರ್ “ಕೃತಿ ಲೋಕಾರ್ಪಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾ. ದಾಮೋದರ ಶೆಟ್ಟಿ, ಉದ್ಯಮಿಗಳು ಹಾಗೂ ಚಲನಚಿತ್ರ ನಿರ್ಮಾಪಕ ದೇವದಾಸ್ ಪಾಂಡೇಶ್ವರ್, ಕರ್ನಾಟಕ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್,  ಕೊರಗ ಅಭಿವೃದ್ಧಿ ಸಂಘ ಮಾಜಿ ಜಿಲ್ಲಾಧ್ಯಕ್ಷ ರಮೇಶ್ ಮಂಚಕಲ್ ಆಗಮಿಸಿದ್ದರು. 


ಕಾರ್ಯಕ್ರಮವನ್ನು ಡಾ. ಮಹಾಲಿಂಗ ಭಟ್ (ಮುಖ್ಯಸ್ಥರು ಕನ್ನಡ ವಿಭಾಗ, ಸಂತ ಅಲೋಶಿಯಸ್ ಕಾಲೇಜು) ಪ್ರೊ. ಕೃಷ್ಣಮೂರ್ತಿ. (ಅಧ್ಯಕ್ಷರು ವಿಕಾಸ, ಸಂತ ಅಲೋಶಿಯಸ್ ಕಾಲೇಜು ಮಂಗಳೂರು), ಗೋಪಾಲಕೃಷ್ಣ ಶೆಟ್ಟಿ (ಅಧ್ಯಕ್ಷರು ರಂಗ ಸಂಗಾತಿ ಮಂಗಳೂರು) ಅವರು ನಡೆಸಿಕೊಟ್ಟರು.  ಕಾರ್ಯಕ್ರಮದಲ್ಲಿ ಕೊರಲ್ ಕಲಾ ತಂಡದಿಂದ ಡೋಲು ಪ್ರಾಕ್ಷಿಕತೆ ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು