3:00 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ಲೋಕಾರ್ಪಣೆ

25/05/2022, 21:55

ಮಂಗಳೂರು(reporterkarnataka.com) :  ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ
ಸಂತ ಅಲೋಶಿಯಸ್ ಕಾಲೇಜು ಕನ್ನಡ ವಿಭಾಗ ಹಾಗೂ ಮಂಗಳೂರಿನ ಆಕೃತಿ ಹಾಗೂ ಆಶಯ ಪಬ್ಲಿಕೇಷನ್ಸ್ ಸಹಕಾರದೊಂದಿಗೆ ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ನಗರದ ಸಂತ ಅಲೋಶಿಯಸ್ ಕಾಲೇಜಿನ ಎಲ್. ಎಫ್. ರಸ್ಕಿನ ಸಭಾಂಗಣದಲ್ಲಿ ಬುಧವಾರ ಲೋಕಾರ್ಪಣೆಗೊಂಡಿತು.

ಶಶಿರಾಜ್ ರಾವ್ ಕಾವೂರು ಅವರು ವೃತ್ತಿಯಲ್ಲಿ ನ್ಯಾಯವಾದಿಯಾಗಿ ಆಸಕ್ತಿಯಲ್ಲಿ ನಾಟಕಕಾರರಾಗಿ, ಪುಸ್ತಕ ಬರಹಗಾರರಾಗಿ ಪರಿಚಿತರು. ನಾಟಕಕಾರರಾಗಿ, ನಾಟಕ ಬರಹಗಾರರಾಗಿ, ನಿರ್ದೇಶಕರಾಗಿ ಅಲ್ಲೂ ಸೈ ಎನಿಸಿಕೊಂಡವರು. ಹಲವು ನಾಟಕಗಳಿಗೆ ಗೀತ ರಚನೆಕಾರರಾಗಿ ದುಡಿದ ಅನುಭವ ಶಶಿರಾಜ್ ಕಾವೂರು ಅವರಿಗಿದೆ.

ಕೃತಿ ಲೋಕಾರ್ಪಣೆ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಂತ ಅಲೋಶಿಯಸ್ ಕಾಲೇಜಿನ ಕುಲಸಚಿವ ಡಾ. ಆಲ್ವಿನ್ ಡೇಸಾ ವಹಿಸಿದ್ದರು. ತುಳು -ಕನ್ನಡ ವಿದ್ವಾಂಸ ಡಾ. ಬಿ. ಎ. ವಿವೇಕ ರೈ 
ಅವರು “ಪುದ್ದು ಕೊಡ್ತರ್ “ಕೃತಿ ಲೋಕಾರ್ಪಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾ. ದಾಮೋದರ ಶೆಟ್ಟಿ, ಉದ್ಯಮಿಗಳು ಹಾಗೂ ಚಲನಚಿತ್ರ ನಿರ್ಮಾಪಕ ದೇವದಾಸ್ ಪಾಂಡೇಶ್ವರ್, ಕರ್ನಾಟಕ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್,  ಕೊರಗ ಅಭಿವೃದ್ಧಿ ಸಂಘ ಮಾಜಿ ಜಿಲ್ಲಾಧ್ಯಕ್ಷ ರಮೇಶ್ ಮಂಚಕಲ್ ಆಗಮಿಸಿದ್ದರು. 


ಕಾರ್ಯಕ್ರಮವನ್ನು ಡಾ. ಮಹಾಲಿಂಗ ಭಟ್ (ಮುಖ್ಯಸ್ಥರು ಕನ್ನಡ ವಿಭಾಗ, ಸಂತ ಅಲೋಶಿಯಸ್ ಕಾಲೇಜು) ಪ್ರೊ. ಕೃಷ್ಣಮೂರ್ತಿ. (ಅಧ್ಯಕ್ಷರು ವಿಕಾಸ, ಸಂತ ಅಲೋಶಿಯಸ್ ಕಾಲೇಜು ಮಂಗಳೂರು), ಗೋಪಾಲಕೃಷ್ಣ ಶೆಟ್ಟಿ (ಅಧ್ಯಕ್ಷರು ರಂಗ ಸಂಗಾತಿ ಮಂಗಳೂರು) ಅವರು ನಡೆಸಿಕೊಟ್ಟರು.  ಕಾರ್ಯಕ್ರಮದಲ್ಲಿ ಕೊರಲ್ ಕಲಾ ತಂಡದಿಂದ ಡೋಲು ಪ್ರಾಕ್ಷಿಕತೆ ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು