9:32 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಶತದಿನೋತ್ಸವದತ್ತ ‘ಪಯಣ್‌’ ಕೊಂಕಣಿ ಸಿನೆಮಾ: 29ರಂದು ಮಂಗಳೂರಿನಲ್ಲಿ ಸಂಭ್ರಮ

27/12/2024, 16:20

ಮಂಗಳೂರು(reporterkarnataka.com):ಬಿಡುಗಡೆಗೊಂಡ ದಿನದಿಂದಲೇ ಜನಮನ ಗೆದ್ದ, ಸಂಗೀತ್‌ ಘರ್‌’ ಬ್ಯಾನರ್‌ನಡಿಯಲ್ಲಿ ಯೊಡ್ಲಿಂಗ್‌ ಕಿಂಗ್‌ ಮೆಲ್ವಿನ್‌ ಪೆರಿಸ್‌ ಮತ್ತು ನೀಟ ಪೆರಿಸ್‌ ನಿರ್ಮಿಸಿರುವ “ಪಯಣ್‌’ ಕೊಂಕಣಿ ಚಲನಚಿತ್ರವು ನೂರನೇ ದಿನದತ್ತ ದಾಪುಗಾಲು ಹಾಕುತ್ತಿದೆ. ಸೀಮಿತ ಮಾರುಕಟ್ಟೆಯಿಂದಾಗಿ ಕೊಂಕಣಿಯಲ್ಲಿ ಸಿನಿಮಾ ತಯಾರಿಸುವುದು ಮತ್ತು ಚದುರಿ ಹೋಗಿರುವ ಕೊಂಕಣಿ ಜನರಿಗೆ ಅದನ್ನು ತಲುಪಿಸುವುದು ಬಲುದೊಡ್ಡ ಪ್ರಯಾಸದ ಕೆಲಸ. ಆದರೆ “ಪಯಣ್‌’ ಸಿನಿಮಾ ತಂಡವು ‘ಪಯಣ್‌’ ಸಿನಿಮಾ ನೂರು ದಿನಗಳ ಪ್ರದರ್ಶನವನ್ನು ಕಾಣುವಂತೆ ನಿರಂತರ ಶ್ರಮವಹಿಸಿ ದುಡಿದಿದೆ. ಕೋಟ್ಯಾಂತರ ಬಜೆಟಿನ ಚಿತ್ರಗಳು ಸೋಲುತ್ತಿರುವಾಗ, ಸೀಮಿತ ಮಾರುಕಟ್ಟೆಯಿರುವ ಕೊಂಕಣಿ ಸಮಾಜದ ಸಿನಿಮಾವೊಂದು ನೂರು ದಿನಗಳ ಪ್ರದರ್ಶನವನ್ನು ಕಾಣುವುದು ನಿಜಕ್ಕೂ ದಾಖಲೆಯೇ ಸರಿ. ಕಳೆದ ವರ್ಷ ತೆರೆಕಂಡ “ಅಸ್ಮಿತಾಯ್‌’ ಕೊಂಕಣಿ ಚಲನಚಿತ್ರದ ಬಳಿಕ ನೂರು ದಿನಗಳ ಪ್ರದರ್ಶನ ಕಂಡ ದ್ವಿತಿಯ ಚಿತ್ರವಾಗಿ ‘ಪಯಣ್‌’ ಇತಿಹಾಸ ಸೃಷ್ಠಿಸಿದೆ.

“ಪಯಣ್‌’ ಜೀವನದ ನಿಜವಾದ ಸಾಮರಸ್ಯಕ್ಕೆ ಸಂಗೀತ ಕಲೆಯ ನಿಪುಣತೆಗಿಂತಲೂ ಹೆಚ್ಚಿನದ್ದು ಬೇಕು ಎಂಬುದನ್ನು ಅನುಭವಿಸಿ ಜೀರ್ಣಿಸಿಕೊಳ್ಳುವ ಸಂಗೀತಗಾರನ ಜೀವನಗಾಥೆ. ನಾಯಕ ಸಂಗೀತ ಉದ್ಯಮದ ಸವಾಲುಗಳನ್ನು ಎದುರಿಸಿ ಮುನ್ನಡೆಯುವಾಗ – ವೈಯಕ್ತಿಕ ಪೈಶಾಚಿಕತೆಯನ್ನು ಎದುರಿಸುವುದರೊಂದಿಗೆ ವಂಚನೆ ಮತ್ತು ಕಸುಬಿನ ಅನಿರೀಕ್ಷಿತ ಜಾಲಗಳನ್ನು ಎದುರಿಸುತ್ತಾನೆ. ಸಂಗೀತ ಕ್ಷೇತ್ರದಲ್ಲಿ ಪಡಿಯಚ್ಚನ್ನು ಒತ್ತಿ, ತನ್ನ ಹಿಂದೆ ಪರಂಪರೆಯೊಂದನ್ನು ಬಿಟ್ಟು ಹೋಗುವ ಬಯಕೆಯಿಂದ ಪ್ರೇರೇಪಿಸಲ್ಪಟ್ಟ ಅವ ತನ್ನ ಸಂಗೀತ ಜೀವನದಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಕೇಂದ್ರಬಿಂದುವಾಗಿಸಿದ ಕಥೆಯೇ ಪಯಣ್‌.
ಶತದಿನೋತ್ಸವ ಸಂಭ್ರಮವು ಡಿಸೆಂಬರ್‌ 29ರಂದು ಸಂಜೆ 4.00 ಗಂಟೆಗೆ ಸರಿಯಾಗಿ ಬಿಜೈನಲ್ಲಿರುವ ಭಾರತ್‌ ಸಿನೆಮಾದಲ್ಲಿ ನಡೆಯಲಿದೆ. ಈ ಸಮಾರಂಭಕ್ಕೆ ವಿಧಾನ ಪರಿಷತ್‌ ಶಾಸಕ ಐವನ್‌ ಡಿಸೋಜಾರವರು ಮುಖ್ಯ ಅಥಿತಿಯಾಗಿ ಆಗಮಿಸಲಿರುವರು. ಸಂತ ಅಲೋಶಿಯಸ್‌ ಸಮೂಹ ವಿದ್ಯಾ ಸಂಸ್ಥೆಗಳ ರೆಕ್ಟರ್‌ ವಂ| ಮೆಲ್ವಿನ್‌ ಜೋಸೆಫ್‌ ಪಿಂಟೊ ಮತ್ತು ಅನಿವಾಸಿ ಉಧ್ಯಮಿ ಶ್ರೀ ಜೇಮ್ಸ್‌ ಡಿ’ಸೋಜಾ ದುಬಾಯ್‌ ಇವರುಗಳು ಗೌರವ ಅಥಿತಿಗಳಾಗಿರುವರು.
ಪಯಣ್‌ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕ ಜೊಯೆಲ್‌ ಪಿರೇರಾ ಬರೆದಿದ್ದು, ರೋಶನ್‌ ಡಿ’ಸೋಜಾ ಆಂಜೆಲೊರ್‌ ಸಂಗೀತ ನಿರ್ದೇಶನ ನೀಡಿದ್ದಾರೆ. ಪುತ್ತೂರಿನ ಯುವ ಪ್ರತಿಭೆ ಬ್ರಾಯನ್‌ ಸಿಕ್ಟೇರಾ ನಾಯಕನಾಗಿ ಹಾಗೂ ಜಾಸ್ಮಿನ್‌ ಡಿ’ಸೋಜಾ, ಕೇಟ್‌ ಪಿರೇರಾ ಮತ್ತು ಶೈನಾ ಡಿ’ಸೋಜ ನಾಯಕಿಯರಾಗಿ ನಟಿಸಿದ್ದಾರೆ. ನಟರಾದ ರೈನಲ್‌ ಸಿಕ್ವೇರಾ, ಲೆಸ್ಲಿ ರೇಗೊ, ಜೆರಿ ರಸ್ಕಿನ್ನಾ, ವಾಲ್ಟರ್‌ ನಂದಳಿಕೆ, ಜೀವನ್‌ ವಾಸ್‌, ಜೊಸ್ಸಿ ರೇಗೊ, ಆಲ್ವಿನ್‌ ದಾಂತಿ, ಆಲ್ಬರ್ಟ್‌ ಪೆರಿಸ್‌, ಅರುಣ್‌ ನೊರೊನ್ಹಾ, ಡೆನ್ವರ್‌ ಪೆರಿಸ್‌, ಡೆನ್ವರ್‌ ಡಿ’ಸೋಜಾ, ಮೆಲಿಶಾ ಪಿಂಟೊ ಮುಖ್ಯ ಭೂಮಿಕೆಯಲ್ಲಿದ್ದಾರೆ.
ಸಾಹಿತ್ಯ ಮತ್ತು ರಾಗ ಸಂಯೋಜನ್‌ ಮೆಲ್ವಿನ್‌ ಪೆರಿಸ್‌, ಛಾಯಾಗ್ರಹಣ ವಿ. ರಾಮಾಂಜನೆಯ ಮತ್ತು ಸಂಕಲನ ಮೆವಿನ್‌ ಜೊಯೆಲ್‌ ಪಿಂಟೊ, ಶಿರ್ತಾಡಿ ಇವರದ್ದು.

ಇತ್ತೀಚಿನ ಸುದ್ದಿ

ಜಾಹೀರಾತು