4:16 PM Monday23 - September 2024
ಬ್ರೇಕಿಂಗ್ ನ್ಯೂಸ್
2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

ಇತ್ತೀಚಿನ ಸುದ್ದಿ

ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚರ್ ಗೆ ಉರ್ದು ಬೇಕೇಬೇಕು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶಕ್ಕೆ ಕರವೇ ಗರಂ

23/09/2024, 16:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail com
ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚರ್ ಗೆ ಉರ್ದು ಬೇಕೇಬೇಕು ಎನ್ನುವ ಸರಕಾರದ ಆದೇಶಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.
ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚರ್ ಗೆ ಕನ್ನಡದ ಜೊತೆ ಉರ್ದು ಭಾಷೆ ಬರಬೇಕು ಎಂದು ಮೂಡಿಗೆರೆ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ ಆದೇಶ ಹೊರಡಿಸಿದೆ.ಇದಕ್ಕೆ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂದು ಕರವೇ ಹಾಗೂ ಬಿಜೆಪಿ ಕಿಡಿ ಕಾರಿದೆ.


ನಿಗದಿಯ ಹುದ್ದೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆದೇಶವನ್ನು ಇಲಾಖೆ ನೀಡಿದೆ. ಇದಕ್ಕೆ ಪ್ರತಿಯಾಗಿ ಕರವೇ ಕರ್ನಾಟಕದಲ್ಲಿ ಕನ್ನಡವೇ ಪ್ರಥಮ ಭಾಷೆ, ಈ ಆದೇಶದಿಂದ ಕನ್ನಡಕ್ಕೆ ಅನ್ಯಾಯವಾಗುತ್ತದೆ.
ಅಲ್ಪಸಂಖ್ಯಾತರನ್ನೇ ನೇಮಕ ಮಾಡಲು ಉರ್ದು ಭಾಷೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದೆ.
ಸರ್ಕಾರ ಕೂಡಲೇ ಈ ಆದೇಶವನ್ನ ಹಿಂಪಡೆಯಬೇಕು.
ಸರ್ಕಾರ ಆದೇಶ ಹಿಂಪಡೆದು ಕನ್ನಡಕ್ಕೆ ಆದ್ಯತೆ ನೀಡದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು